ಮೈಸೂರು: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಮಿಸ್ ಆದ ಬಳಿಕ ಪ್ರತಾಪ್ ಸಿಂಹ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಯದುವೀರ್ ಅವರನ್ನು ಕೂಡ ಬೇಟಿ ಮಾಡಿರಲಿಲ್ಲ. ಇದೀಗ ಮೈಸೂರು ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿರುವ ಮಾಧ್ಯಮ ಸಂವಾದದಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಮುಖಾಮುಕಿಯಾಗಿದ್ದು ಇಬ್ಬರೂ ಗೌರವದಿಂದಲೇ ನಡೆದುಕೊಂಡಿದ್ದಾರೆ.
ಮಾಧ್ಯಮ ಸಂವಾದದಲ್ಲಿ ಯದುವೀರ್ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ನನ್ನ ತಂದೆ ನಾಲ್ಕು ಬಾರಿ ಸಂಸದರಾಗಿದ್ದರು. ನಮಗೆ ಎಲ್ಲಾ ಪಕ್ಷದವರೊಂದಿಗೆ ಉತ್ತಮ ಒಡನಾಟ ಇದೆ ಎಂದರು.ಹಾಗೂ ಬಿಜೆಪಿಯೊಂದಿಗೆ ನನ್ನ ಉತ್ತಮ ಹೊಂದಾಣಿಕೆ ಇದೆ ಎಂದರು.
ಜನರಿಗೆ ಅರಮನೆ ಬಗ್ಗೆ ಭಾವನಾತ್ಮಕ ಸಂಬಂಧ ಇದೆ.ನಾನು ರಾಜ ಎಂದು ಹೇಳಿಕೊಂಡು ತಿರುಗುತ್ತಿಲ್ಲ. ಅರಮನೆಗೆ ಒಂದು ಪರಂಪರೆ ಇದೆ.ಅದನ್ನು ಹೊರತುಪಡಿಸಿದರೆ ನಾನು ಕೂಡ ಸಾಮಾನ್ಯನೆ ಎಂದು ಹೇಳಿದ್ದಾರೆ.
ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು 'ಸಂಕಲ್ಪ ಪತ್ರಕ್ಕೆ ನಿಮ್ಮ ಸಲಹೆ' ಕಾರ್ಯಕ್ರಮದಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ. pic.twitter.com/9PXmF1svoi
— Pratap Simha (Modi Ka Parivar) (@mepratap) March 18, 2024
ಬಳಿಕ ಪ್ರತಾಪ್ ಸಿಂಹ ಮಾತನಾಡಿ, ಯದುವಿರ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ,ಇನ್ನು ರಾಜರಾಗಿ ಪರಿಚಯವಾಗಿದ್ದ ಅವರು ನಾಡಿನ ಜನತೆಗೆ ಅಭ್ಯರ್ಥಿಯಾಗಿ ಮನವರಿಕೆ ಮಾಡಿಕೊಡಬೇಕು. ಇದಕ್ಕೆ ಮಾಧ್ಯಮ ಮುಖ್ಯ ಎಂದರು.
ನಾನು ಪಕ್ಷಕ್ಕೂ ದ್ರೋಹ ಮಾಡಲ್ಲ, ಪಕ್ಷದವರಿಗೂ ದ್ರೋಹ ಮಾಡಲ್ಲ.ನಾನು ಯದುವೀರ್ ಅಭ್ಯರ್ಥಿಯಾಗಿ ಆಯ್ಕೆ ಆಗುವ ಮುಂಚೆ ರಾಜನಿಗೆ ರಾಜಕಾರಣಿಯಾಗಿ ಕಾರ್ಯನಿರ್ವಹಿಸಲು ಆಗುತ್ತ ಎಂದು ಪ್ರಶ್ನೆ ಕೇಳಿದ್ದೆ ಅದಕ್ಕೆ ಯದುವೀರ್ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದರು