News Karnataka Kannada
Monday, April 29 2024
ಮೈಸೂರು

ನಾಳೆ (ಜೂನ್‌ 11ರಂದು) ಕುಡಿಯುವ ನೀರು ಪೂರೈಕೆ ಕುರಿತು ಸಭೆ: ಸಿಎಂ ಹೇಳಿಕೆ

Meeting on drinking water supply tomorrow (June 11): CM statement
Photo Credit :

ಮೈಸೂರು: ನಾಳೆಯಿಂದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣ ಯೋಜನೆ ಜಾರಿ ಆಗುತ್ತದೆ ಹಾಗೂ ರಾಜ್ಯದ ಎಲ್ಲ ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಇತರೆ ಬಸ್‌ಗಳಲ್ಲಿ ಉಚಿತ ಪ್ರಯಾಣ ದೊರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜೂನ್‌ 11ರಂದು ಮಧ್ಯಾಹ್ನ 1ಗಂಟೆಯಿಂದ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.

ಮೈಸೂರಿನ ಸುತ್ತೂರು ಹೆಲಿಪ್ಯಾಡ್‌ನಲ್ಲಿಮಾತನಾಡಿದ ಅವರು ವಿಧಾನಸೌಧದ ಬಳಿ ನಾನು, ಡಿಸಿಎಂ ಹಾಗೂ ಸಾರಿಗೆ ಮಂತ್ರಿ ಯೋಜನೆ ಜಾರಿ ಮಾಡುತ್ತೇವೆ ಹಾಗೂ ಜಿಲ್ಲಾ ಕೇಂದ್ರದಲ್ಲಿ ಏಕಕಾಲಕ್ಕೆ ಜಾರಿಯಾಗುತ್ತದೆ ಎಂದರು. ಜಿಎಸ್‌ಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ರಾಜ್ಯದ ಪಾಲಿಗೆ ಬರಬೇಕಾದ ಹಣವನ್ನು ಒತ್ತಾಯಪೂರ್ವಕವಾಗಿ ಕೇಳುತ್ತೇವೆ ಎಂದರು. ರಾಜ್ಯದಲ್ಲಿ ಮಳೆ ಕೊರತೆ ವಿಚಾರವಾಗಿ ಸೋಮವಾರ ಅಧಿಕಾರಿಗಳ ಸಭೆ ಕರೆಯಲಾಗಿದೆ. ಮಳೆ ಸಮಸ್ಯೆ ಇರುವ ಜಿಲ್ಲಾಧಿಕಾರಿಗಳ ಜೊತೆ ಕೂಡ ವೀಡಿಯೋ ಕಾನ್ಫರೆನ್ಸ್ ಮಾಡಿ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಜುಲೈ 1 ರಿಂದ ಗುಲ್ಬರ್ಗದಲ್ಲಿ ಗೃಹಜ್ಯೋತಿ ಯೋಜನೆ ಜಾರಿಗೆ ಬರಲಿದೆ. ಜುಲೈ 1 ರಂದೇ ಹತ್ತು ಕೆಜಿ ಆಹಾರ ಧಾನ್ಯ ಕೊಡುವ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗುವುದು. ಜುಲೈ 16 ರಿಂದ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿ ಆಗುತ್ತದೆ. 2022-23ರಲ್ಲಿ ಪಾಸ್ ಆದ ಪದವಿ, ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳು 24 ತಿಂಗಳಲ್ಲಿ ಕೆಲಸ ಸಿಗದಿದ್ದರೆ ಹಣ ದೊರೆಯಲಿದೆ ಎಂದು ಸ್ಪಷ್ಟ ಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನೆ ಸಚಿವರಾದ ಕೆ.ವೆಂಕಟೇಶ್ ಹಾಗೂ ಇತರೆ ಗಣ್ಯರು ಉಪಸ್ಧಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು