ನಂಜನಗೂಡು: ಇಂದು ನಂಜನಗೂಡು ಬಸ್ ನಿಲ್ದಾಣದ ಆವರಣದಲ್ಲಿ ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಸಾರಿಗೆ ಬಸ್ ಸೇವೆ ನೀಡುವ ನಮ್ಮ ಸರ್ಕಾರದ ಬಹುನಿರೀಕ್ಷಿತ ‘ಶಕ್ತಿ ಯೋಜನೆ’ ಯನ್ನು ನಂಜನಗೂಡು ವಿಧಾನಸಭಾ ಕ್ಷೇತ್ರದ ಯುವ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರು ನಮ್ಮ ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಧಿಕೃತ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ರವರು, ತಹಸೀಲ್ದಾರ್ ಶಿವಕುಮಾರ್ ರವರು, ಕ.ರ.ರಾ.ಸಾ. ನಿಗಮದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರು, ಸಾರ್ವಜನಿಕರು ಉಪಸ್ಥಿತರಿದ್ದರು.