Categories: ಮೈಸೂರು

ಪ್ರಣಾಳಿಕೆ ಘೋಷಿಸಿದ ಮೋದಿ : ಉಚಿತ ಯೋಜನೆಗಳ ಪಟ್ಟಿ ಹೀಗಿದೆ

ಮೈಸೂರು: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮೋದಿ ಅವರು, ಮತ್ತೆ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ರಚನೆಯಾದರೆ ಮುಂದಿನ ಐದು ವರ್ಷಕ್ಕೆ ಏನೆಲ್ಲ ಕೆಲಸ ಮಾಡುತ್ತೇವೆ ಎಂದು ಹಾಗೂ ಗೆ ಏನೆಲ್ಲ ಉಚಿತವಾಗಿ ಸಿಗಲಿದೆ ಎಂದು ತಿಳಿಸಿದರು.

ಯುವಕರು, ಮಹಿಳೆಯರು, ರೈತರು ಹಾಗೂ ಬಡವರನ್ನು ಇಟ್ಟುಕೊಂಡು ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ ಎಂದ ಅವರು ಉಚಿತ ಆಯೋಜನಗಳ ಪಟ್ಟಿ ತಿಳಿಸಿದ್ದಾರೆ.
ಬಡ ಕುಟುಂಬಗಳಿಗೆ ಉಚಿತ ಪಡಿತರ
ಬಡ ಕುಟುಂಬಗಳಿಗೆ ಉಚಿತ ಪಡಿತರ ನೀಡುವ ಕಾರ್ಯಕ್ರಮವನ್ನು ಮುಂದುವರಿಸುತ್ತೇವೆ. 2020ರಲ್ಲಿ ಈ ಯೋಜನೆ ಆರಂಭಿಸಲಾಗಿತ್ತು. ಈ ಯೋಜನೆಯಡಿ 80 ಕೋಟಿಗೂ ಹೆಚ್ಚು ಕುಟುಂಬಗಳಿಗೆ ಉಚಿತ ಪಡಿತರ ನೀಡಲಾಗುತ್ತಿದೆ. ಬಡವರ ತಟ್ಟೆಯನ್ನು ಖಾಲಿ ಬಿಡಲು ಬಿಡುವುದಿಲ್ಲ ಎಂದಿದ್ದಾರೆ

70 ವರ್ಷ ಮೇಲ್ಪಟ್ಟ ವೃದ್ಧರಿಗೆ ಉಚಿತ ಚಿಕಿತ್ಸೆ
ಆಯುಷ್ಮಾನ್ ಭಾರತ್ ಯೋಜನೆಯಡಿ ಬಡ ಕುಟುಂಬಗಳಿಗೆ 5 ಲಕ್ಷ ರೂಪಾಯಿಗಳ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದರ ವ್ಯಾಪ್ತಿಯನ್ನು ವಿಸ್ತರಿಸುತ್ತೇವೆ. ಇತರೆ ಆರೋಗ್ಯ ಸೇವೆಗಳನ್ನೂ ಇದರಡಿ ಸೇರಿಸಲಾಗುವುದು. ಶೇಕಡಾ 80 ರಷ್ಟು ರಿಯಾಯತಿಯೊಂದಿಗೆ ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳು ಲಭ್ಯವಾಗಲಿದೆ

ಪೈಪ್​ಲೈನ್ ಮೂಲಕ ಎಲ್​ಪಿಜಿ:
ಉಜ್ವಲ ಯೋಜನೆಯಡಿ ಬಡ ಕುಟುಂಬಗಳಿಗೆ ಗ್ಯಾಸ್ ಸಂಪರ್ಕ ನೀಡಲಾಗುತ್ತಿದೆ. ಪ್ರತಿ ಮನೆಗೂ ಗ್ಯಾಸ್ ಸೌಲಭ್ಯ ತಲುಪಿದೆ. ಈಗ ಪೈಪ್ ಮೂಲಕ ಪ್ರತಿ ಮನೆಗೆ ಅಗ್ಗದ ಅಡುಗೆ ಅನಿಲ ತಲುಪಿಸಲಾಗುವುದು. ಮೂರು ಕೋಟಿ ಕುಟುಂಬಗಳಿಗೆ ಶಾಶ್ವತ ಮನೆ ನೀಡಲಾಗುವುದು ಎಂದರು.

ಉಚಿತ ವಿದ್ಯುತ್
ಪ್ರಧಾನ ಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಡಿ ಸೋಲಾರ್ ಮೂಲಕ 300 ಯುನಿಟ್​ವರೆಗೆ ಉಚಿತ್ ವಿದ್ಯುತ್ ನೀಡಲಾಗುವುದು ಎಂದರು. ಅಷ್ಟೇ ಅಲ್ಲ, ಸೋಲಾರ್ ಮೂಲಕ ವಿದ್ಯುತ್ ಉತ್ಪಾದಿಸುವ ಜನರು, ವಾರ್ಷಿಕ ಸಾವಿರಾರರು ರೂಪಾಯಿ ಮುದ್ರಾ ಯೋಜನೆಯ ಮಿತಿಯನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

Nisarga K

Recent Posts

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

5 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

32 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

42 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

53 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago