News Karnataka Kannada
Sunday, April 28 2024
ಮೈಸೂರು

ದಸರಾ ಕವಿಗೋಷ್ಠಿಯಲ್ಲಿ 250ಕ್ಕೂ ಹೆಚ್ಚು ಕವಿಗಳು ಭಾಗಿ

More than 250 poets participate in Dasara poetry meet
Photo Credit : News Kannada

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಕವಿಗೋಷ್ಠಿ ವೈವಿಧ್ಯಪೂರ್ಣವಾಗಿದೆ. ಅ.17ರಿಂದ 21ರವರೆಗೆ 7 ವಿಭಾಗಗಳಲ್ಲಿ ಕವಿಗೋಷ್ಠಿ ಜರುಗಲಿದೆ. 250ಕ್ಕೂ ಹೆಚ್ಚು ಭಾಗಿಗಳು ಪಾಲ್ಗೊಳ್ಳುತ್ತಿದ್ದಾರೆ.

ನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿ ಉಪ ಸಮಿತಿ ಉಪ ವಿಶೇಷಾಧಿಕಾರಿ ಡಾ.ಎಂ.ದಾಸೇಗೌಡ ಪೋಸ್ಟರ್ ಲೋಕಾರ್ಪಣೆ ಮಾಡಿ ವಿವರ ನೀಡಿ, ಅ.17ರಂದು ಬೆಳಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ಕಾವ್ಯ ಸಂಭ್ರಮವನ್ನು ಕವಿ ಜಯಂತ ಕಾಯ್ಕಿಣಿ ಉದ್ಘಾಟಿಸುವರು. ಶಾಸಕ ಕೆ.ಹರೀಶ್‌ಗೌಡ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಾಹಿತಿ ಕುಂ.ವೀರಭದ್ರಪ್ಪ ಅತಿಥಿಗಳಾಗಿ ಪಾಲ್ಗೊಳ್ಳುವರು. ಗುರುರಾಜ್ ಮೈಸೂರು, ದೇವಾನಂದ ವರಪ್ರಸಾದ್ ತಂಡದವರಿAದ ಜಾನಪದ ಗಾಯನ ಇರಲಿದೆ ಎಂದು ಹೇಳಿದರು.

ಅ.18ರಂದು ಬೆಳಗ್ಗೆ 11 ಗಂಟೆಗೆ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಚಿಗುರು ಕವಿಗೋಷ್ಠಿಯನ್ನು ಶಾಸಕ ಹರೀಶ್‌ಗೌಡ ಉದ್ಘಾಟಿಸುವರು. ಕವಯತ್ರಿ ಡಾ.ಎನ್.ಕೆ.ಲೋಲಾಕ್ಷಿ, ಮಕ್ಕಳ ಸಾಹಿತಿ ಫಾ.ಗು.ಸಿದ್ದಾಪುರ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಮಹಿಳಾ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಯತ್ರಿ ಸವಿತಾ ನಾಗಭೂಷಣ ವಹಿಸುವರು. ಕಲಾವಿದ ಚಿತ್ಕಾಳ ಬಿರಾದರ್, ಕವಿ ಸತೀಶ್ ಕುಲಕರ್ಣಿ ಭಾಗವಹಿಸುವರು.

ಅ.19ರಂದು ಬೆಳಗ್ಗೆ 11 ಗಂಟೆಗೆ ರಾಣಿಬಹದ್ದೂರ್ ಸಭಾಂಗಣದಲ್ಲಿ ಪ್ರಾದೇಶಿಕ ಕವಿಗೋಷ್ಠಿಯನ್ನು ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಉದ್ಘಾಟಿಸುವರು. ಚ.ಸರ್ವಮಂಗಳ ಅಧ್ಯಕ್ಷತೆ ವಹಿಸುವರು. ಸಾಹಿತಿ ಡಾ.ಎಚ್.ಟಿ. ಪೋತೆ ಅತಿಥಿಯಾಗಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಯತ್ರಿ ಡಾ.ವಿನಯಾ ಒಕ್ಕುಂದ ವಹಿಸುವರು. ಶಾಸಕ ಶ್ರೀವತ್ಸ, ಕವಿ ಡಾ.ಎಚ್.ಸಿ. ಸತ್ಯನಾರಾಯಣ ಭಾಗವಹಿಸುವರು.

ಅ.19ರಂದು ಸಂಜೆ 7 ಗಂಟೆಗೆ ಕ್ಲಾಸಿಕ್ ಕನ್ವೆನ್ಷನ್ ಹಾಲ್‌ನಲ್ಲಿ ಉರ್ದು ಕವಿಗೋಷ್ಠಿ ನಡೆಯಲಿದೆ. ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸುವರು. ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ ಭಾಗವಹಿಸುವರು. ಅ.21ರಂದು ಕಲಾಮಂದಿರದಲ್ಲಿ ಪ್ರಧಾನ ಕವಿಗೋಷ್ಠಿ ನಡೆಯಲಿದೆ. ಕವಯತ್ರಿ ಶಶಿಕಲಾ ವಸ್ತçದ ಉದ್ಘಾಟಿಸುವರು. ಕವಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅಧ್ಯಕ್ಷತೆ ವಹಿಸುವರು. ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ಕೆ.ಹರೀಶ್‌ಗೌಡ ಭಾಗವಹಿಸುವರು ಎಂದು ಹೇಳಿದರು.

ಹಾಸ್ಯ-ಚುಟುಕು ಕವಿಗೋಷ್ಠಿಯಲ್ಲಿ 20, ಚಿಗುರು ಕವಿಗೋಷ್ಠಿ 40, ಮಹಿಳಾ ಕವಿಗೋಷ್ಠಿ 40, ಪ್ರಾದೇಶಿಕ ಕವಿಗೋಷ್ಠಿಯಲ್ಲಿ 42, ಯುವ ಕವಿಗೋಷ್ಠಿಯಲ್ಲಿ 40, ಉರ್ದು ಕವಿಗೋಷ್ಠಿಯಲ್ಲಿ 20, ಪ್ರಧಾನ ಕವಿಗೋಷ್ಠಿಯಲ್ಲಿ 40 ಕವಿಗಳು ಪಾಲ್ಗೊಳ್ಳುವರು.

ದಸರಾ ಕವಿಗೋಷ್ಠಿ ಉಪ ಸಮಿತಿ ಕಾರ್ಯಾಧ್ಯಕ್ಷೆ ಪ್ರೊ.ವಿಜಯಕುಮಾರಿ ಎಸ್.ಕರಿಕಲ್, ಕಾರ್ಯದರ್ಶಿ ಗಿರಿಧರ್ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು