News Karnataka Kannada
Tuesday, April 30 2024
ಮೈಸೂರು

ಮೈಸೂರು: ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಒಕ್ಕೂಟ ಸ್ಥಾಪನೆ

A Federation has been formed to address the issues of Gram Panchayat members.
Photo Credit :

ಮೈಸೂರು: ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ರಾಜ್ಯದ ಎಲ್ಲ ತಾಲೂಕುಗಳಲ್ಲಿ ಮಹಾ ಒಕ್ಕೂಟ ಹೆಸರಿನಲ್ಲಿ ಸಂಘಟನೆ ಪ್ರಾರಂಭಿಸಲಾಗುವುದು ಎಂದು ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷ ನಾಗರಾಜ್ ಹೇಳಿದರು.

ಪಿರಿಯಾಪಟ್ಟಣದ ತಾ.ಪಂ ಸಭಾಂಗಣದಲ್ಲಿ ತಾಲ್ಲೂಕಿನಲ್ಲಿ ಒಕ್ಕೂಟ ರಚನೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ,  ಕೆಲ ಅಧಿಕಾರಿಗಳು ಗ್ರಾ.ಪಂ ಸದಸ್ಯರಿಗೆ ಅಗೌರವ ತೋರಿ ಕಚೇರಿಯಲ್ಲಿನ ಕೆಲಸಗಳ ಬಗ್ಗೆ ಸರಿಯಾದ ಮಾಹಿತಿ ನೀಡದೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ, ಶಾಸಕರು, ಸಂಸದರು ಸೇರಿದಂತೆ ಮೇಲ್ವರ್ಗದ ಜನ ಪ್ರತಿನಿಧಿಗಳು ಗ್ರಾ.ಪಂ ಸದಸ್ಯರ ಕೆಲಸಗಳಿಗೆ ಅಡ್ಡಿ ಮಾಡುತ್ತಿದ್ದು ಫಲಾನುಭವಿಗಳ ಆಯ್ಕೆ ವಿಚಾರದಲ್ಲಿ ಗ್ರಾ.ಪಂ. ಗಳಿಗೆ ಅಧಿಕಾರ ನೀಡದೆ ವಂಚಿಸುತ್ತಿದ್ದಾರೆ ಎಂದು ದೂರಿದರಲ್ಲದೆ,  ಇಂತಹ ದುರಾಡಳಿತಗಳ ವಿರುದ್ಧ ಕೆಲಸ ನಿರ್ವಹಿಸಲು ಸಂಘಟನೆ ಅತಿ ಮುಖ್ಯ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ರಾಜು ಅವರು ಮಾತನಾಡಿ  ಗ್ರಾ.ಪಂ ಸದಸ್ಯರು ಸಹ ಸಂಸದರು ಶಾಸಕರ ರೀತಿಯೇ ಚುನಾಯಿತ ಪ್ರತಿನಿಧಿಗಳಾಗಿದ್ದು ಮಾಸಿಕ ಗೌರವಧನ ಹೆಚ್ಚಳ ಮತ್ತು ಉಚಿತ ಬಸ್ ಪಾಸ್ ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಸಂಘಟನೆ ಮೂಲಕ ಸರ್ಕಾರದ ಮುಂದಿಡುವ ನಿಟ್ಟಿನಲ್ಲಿ ಗ್ರಾ.ಪಂ ಸದಸ್ಯರ ಮಹಾ ಒಕ್ಕೂಟದ ರಾಜ್ಯ ಘಟಕ ರಚನಾತ್ಮಕ ಕಾರ್ಯಕ್ರಮ ರೂಪಿಸುತ್ತಿದೆ ಎಂದರು.

ಈ ಸಂದರ್ಭ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ರಂಗಸ್ವಾಮಿ, ರಾಜ್ಯ ಜಂಟಿ ನಿರ್ದೇಶಕ ನಿಶಾಂತ್, ಜಿಲ್ಲಾ ಸಲಹೆಗಾರ ರಮೇಶ್, ಗ್ರಾ.ಪಂ ಸದಸ್ಯರಾದ ರವಿಚಂದ್ರ ಬೂದಿತಿಟ್ಟು, ದೇವೇಂದ್ರ,  ರಘುಗೌಡ, ಚಂದ್ರೇಗೌಡ, ಗಿರಿಜಾ, ಪೂಜಾ, ಚಲುವರಾಜು, ನರಸಿಂಹಮೂರ್ತಿ, ಮಂಜುನಾಥ್ ಹಾಗು ತಾಲ್ಲೂಕಿನ ವಿವಿಧೆಡೆಯ ಗ್ರಾ.ಪಂ ಸದಸ್ಯರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು