ಮೈಸೂರು: ದಕ್ಷ ಪಿಯು ಕಾಲೇಜಿನಲ್ಲಿ ಡಾ.ಎಸ್.ಎ.ಮೋಹನ್ ಕೃಷ್ಣ ಅವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿರುವ ಇವರು ವಿಜ್ಞಾನ, ತಂತ್ರಜ್ಞಾನ ಹಾಗೂ ಇಂಜಿನಿಯರಿಂಗ್ ವಿಭಾಗದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಇತ್ತೀಚೆಗೆ ದಕ್ಷ ಪಿಯು ಕಾಲೇಜಿನಲ್ಲಿ ಆರ್ಯಭಟ ಪ್ರಶಸ್ತಿ ನೀಡಲಾಯಿತು.
ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆಯವರು ಪ್ರಶಸ್ತಿ ಪ್ರದಾನ ಮಾಡಿದರು. ದಕ್ಷ ಪಿಯು ಕಾಲೇಜಿನ ಸಂಸ್ಥಾಪಕರಾದ ಮೂಗೂರು ದೀಕ್ಷಿತ್, ಜಯಚಂದ್ರ ರಾಜು, ಎಂಎಲ್ಸಿ ಡಿ.ಎಸ್ವೀರಯ್ಯ ಹಾಗೂ ಗುಣವಂತ ಮಂಜು ಹಾಜರಿದ್ದರು. ಬೆಂಗಳೂರಿನ ರಾಷ್ಟ್ರಕವಿ ಕುವೆಂಪು ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಒಕ್ಕೂಟದ ವತಿಯಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.