ಮೈಸೂರು: ಒಂಟಿಕೊಪ್ಪಲು ಶ್ರೀಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಶ್ರಾವಣ ಮಾಸದ 3ನೇ ಶನಿವಾರದಂದು ಅಮೃತ ಮಹೋತ್ಸವ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಾಗರಿಕರಿಗೆ ರಾಷ್ಟ್ರಧ್ವಜ ವಿತರಿಸಿ ಮನೆಮನೆಯಲ್ಲೂ ಹಾರಿಸುವಂತೆ ಜಾಗೃತಿ ಮೂಡಿಸಲಾಯಿತು.
ಇದೇ ಸಂದರ್ಭದಲ್ಲಿ ರಾಷ್ಟ್ರಧ್ವಜ ವಿತರಿಸಿ ಮಹಿಳಾ ಮುಖಂಡರಾದ ವರಲಕ್ಷ್ಮಿ ಅಜಯ್ ರವರು ಮಾತನಾಡಿ ದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು 3ದಿನಗಳು ರಾಷ್ಟ್ರಧ್ವಜ ಹಾರಿಸುವ ಅವಕಾಶವನ್ನು ಪ್ರಧಾನಿ ನರೇಂದ್ರ ಮೋದಿ ರವರು ಕಲ್ಪಿಸಿರುವುದರಿಂದ ಪ್ರತಿಯೊಬ್ಬ ಭಾರತೀಯನೂ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸಿ ಭಾರತಮಾತೆಗೆ ನಮಿಸಿ ಸಂಭ್ರಮದ ವಾತಾವರಣದಲ್ಲಿ ಭಾಗವಹಿಸಬಹುದು.
ಶಾಲಾ ಕಾಲೇಜು ಸರ್ಕಾರಿ ಇಲಾಖೆ ಕಛೇರಿಗಳಲ್ಲಿ ಜನಪ್ರತಿನಿಧಿಗಳು ಮಾತ್ರ ಧ್ವಜಾರೋಹಣ ಮಾಡುತ್ತಿದ್ದರು ಆದರೆ ಇಂದು ಪ್ರಧಾನಿ ಮೋದಿ ರವರ ಕರೆ ಹರಘರ್ ತಿರಂಗಾದಿಂದ ಪ್ರತಿಯೊಬ್ಬ ಭಾರತೀಯನೂ ಸಹ ಹೆಮ್ಮೆಯಿಂದ ತನ್ನ ಕುಟುಂಬದ ಸಣ್ಣಮಕ್ಕಳು ಹಿರಿಯನಾಗರೀಕರ ಜೊತೆ ಒಟ್ಟಾಗಿ ಭಾಗವಹಿಸುವುದನ್ನು ಕಾಣುತ್ತಿದ್ದೇವೆ, ರಾಷ್ಟ್ರಧ್ವಜ ಹಾರಿಸಿ ಸ್ವಾತಂತ್ರ್ಯ ಹೋರಾಟಗಾರರು ವೀರಯೋಧರನ್ನ ಸ್ಮರಿಸೋಣ ಎಂದರು.
ಇದೇ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯ ಚಿಕ್ಕವೆಂಕಟು, ಒಂಟಿಕೊಪ್ಪಲಿನ ಮಹಿಳಾ ಮುಖಂಡರಾದ ವರಲಕ್ಷ್ಮಿ ಅಜಯ್, ಪುರೋಹಿತರಾದ ರಾಜಗೋಪಾಲ್ ಅಯ್ಯಂಗಾರ್, ಸತ್ಯರಂಗನಾಥ್, ನರಸಿಂಹಮೂರ್ತಿ, ನವನೀತ್, ಮುಖಂಡರಾದ ಗೋವಿಂದರಾಜು, ಭರತ್, ಹರೀಶ್, ಗುರು, ಮಂಜುನಾಥ್ ಇದ್ದರು
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ