Categories: ಮೈಸೂರು

ಮೈಸೂರು: ಜು.20 ರಂದು ಕೆ ಆರ್ ಎಸ್ , ಕಬಿನಿಗೆ ಬಾಗಿನ ಅರ್ಪಣೆ

ಮೈಸೂರು: ಕಳೆದ ಬಾರಿ ತಡವಾಗಿ ಭರ್ತಿಯಾದ ಹಿನ್ನಲೆಯಲ್ಲಿ ನವೆಂಬರ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಬಿನಿ ಮತ್ತು ಕೆಆರ್ ಎಸ್ ಜಲಾಶಯಕ್ಕೆ ನವೆಂಬರ್ ತಿಂಗಳಲ್ಲಿ ಬಾಗಿನ ಅರ್ಪಿಸಿದ್ದರು. ಆದರೆ ಈ ಬಾರಿ ಜುಲೈನಲ್ಲಿಯೇ ಈ ಎರಡು ಜಲಾಶಯಗಳು ಭರ್ತಿಯಾಗಿರುವುದರಿಂದ ಜು.20ರಂದು ಬಾಗಿನ ಅರ್ಪಿಸುತ್ತಿದ್ದು, ಎರಡನೇ ಬಾರಿಗೆ ಬಾಗಿನ ಅರ್ಪಿಸುವ ಸುಯೋಗ ಒದಗಿ ಬಂದಂತಾಗಿದೆ.

ಕೊಡಗು ಸೇರಿದಂತೆ ಹಾಸನ ವ್ಯಾಪ್ತಿಯಲ್ಲಿ ಧಾರಾಕಾರವಾಗಿ ಮಳೆಯಾಗಿದ್ದರಿಂದ ಕೆಆರ್ ಎಸ್ ಜಲಾಶಯ ಹಾಗೂ ವೈನಾಡ್ ವ್ಯಾಪ್ತಿಯಲ್ಲಿ ಮಳೆಯಾಗಿದ್ದರಿಂದ ಕಬಿನಿ ಜಲಾಶಯ ಭರ್ತಿಯಾಗಿದ್ದು ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಸಂಪ್ರದಾಯದಂತೆ ಎರಡು ಜಲಾಶಯಕ್ಕೆ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುತ್ತಿದ್ದು, ಅದರಂತೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಜು.20ರಂದು ಬೆಳಗ್ಗೆ 11ಗಂಟೆ ಮತ್ತು ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರಕ್ಕೆ ಮಧ್ಯಾಹ್ನ 12  ಗಂಟೆಗೆ ಮುಖ್ಯಮಂತ್ರಿಗಳು ಬಾಗಿನ ಸಲ್ಲಿಸಲಿದ್ದಾರೆ.

ಅಂದು ಬೆಳಗ್ಗೆ 8.30ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಡಲಿರುವ ಮುಖ್ಯಮಂತ್ರಿಗಳು ಬೆಳಗ್ಗೆ 9.45ಕ್ಕೆ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. 10.40ಕ್ಕೆ ಹೆಲಿಕಾಪ್ಟರ್ ಮೂಲಕ ಬೀಚನಹಳ್ಳಿಗೆ ತೆರಳಿ 11.30ರ ಶುಭಮುಹೂರ್ತದಲ್ಲಿ ಕಬಿನಿಗೆ ಬಾಗಿನ ಅರ್ಪಿಸಲಿದ್ದಾರೆ. ಆ ನಂತರ ಕಬಿನಿ ಜಲಾಶಯ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಕೆಆರ್‌ಎಸ್ ಗೆ ತೆರಳಿ  12.10ಕ್ಕೆ ಕಾವೇರಿ ಮಾತೆಗೆ ವಿಶೇಷ ಪೂಜೆ ಮತ್ತು ಕೃಷ್ಣರಾಜ ಸಾಗರ ಜಲಾಶಯಕ್ಕೆ ಬಾಗಿನ ಸಮರ್ಪಿಸಲಿದ್ದಾರೆ.

Ashika S

Recent Posts

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

7 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

15 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

21 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

35 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

52 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

1 hour ago