ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ದಲ್ಲಿ ಭಾಗವಹಿಸುವ ಆನೆಗಳ ಹಾಗೂ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡೇಶ್ವರಿಗೆ ಸತತವಾಗಿ 25ವರ್ಷಗಳಿಂದ ಪೂಜಾ ಕೈಂಕರ್ಯಗಳನ್ನು ಸಲ್ಲಿಸುತ್ತಿರುವ ಅರಮನೆ ಪುರೋಹಿತ ವಿದ್ವಾನ್ ಪ್ರಹ್ಲಾದ್ ರಾವ್ ಅವರನ್ನು ಮೈಸೂರು ರಕ್ಷಣಾ ವೇದಿಕೆ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಇನ್ನಿತರ ಸಂಘಟನೆ ವತಿಯಿಂದ ಅಭಿನಂದಿಸಲಾಯಿತು.
ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣ ಗೌಡ ರವರು ಕಳೆದ 25ವರ್ಷಗಳಿಂದ ನಾಡಹಬ್ಬ ದಸರಾ ಸಂದರ್ಭದಲ್ಲಿ ಗಜಪಡೆಯನ್ನು ವೇದಬ್ರಹ್ಮ ಅರಮನೆ ಪುರೋಹಿತ ಪ್ರಹಲ್ಲಾದ್ ರವರು ಮೈಸೂರಿಗೆ ಬರಮಾಡಿಕೊಂಡು ನಾಡಿನ ಜನತೆಗೆ ಸುಖ ಶಾಂತಿ ಸಮೃದ್ಧಿ ಸಿಗಲೆಂದು ನಾಡದೇವತೆಯಲ್ಲಿ ಪ್ರಾರ್ಥನೆ ಸಂಕಲ್ಪಿಸಿ ಪ್ರತಿದಿನ ನವರಾತ್ರಿಯಲ್ಲಿ ಆನೆಗೆ ಪೂಜೆ ನೈವೇದ್ಯ ಪ್ರಸಾದ ಕೊಟ್ಟು, ಜಂಬೂಸವಾರಿ ಹೊರಡುವ ಸಂದರ್ಭದಲ್ಲಿ ಅಂಬಾರಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಧಾರ್ಮಿಕ ಸೇವೆಯನ್ನು ಸಲ್ಲಿಸಿಕೊಂಡು ಬರುತ್ತಿದ್ದಾರೆ. ಹಾಗಾಗಿ ಮೈಸೂರು ಜಿಲ್ಲಾಡಳಿತ ಪುರೋಹಿತ ಪ್ರಹಲ್ಲಾದ್ ರವರ ಸೇವೆಯನ್ನ ಪರಿಗಣಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸ ಬೇಕು ಎಂದು ಒತ್ತಾಯಿಸಿದರು.
ಗೌರವ ಸ್ವೀಕರಿಸಿ ಮಾತನಾಡಿದ ಅರಮನೆ ಪುರೋಹಿತರಾದ ಪ್ರಹಲ್ಲಾದ್ ರವರು ಮಾತನಾಡಿ ಕಾಡಿನ ಪ್ರದೇಶವಾದ ಎನ್. ಬೇಗೂರು ಗ್ರಾಮದಲ್ಲಿ ನಮ್ಮ ತಂದೆಯವರಾದ ವಾಸುದೇವರಾವ್ ರವರು ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ನಮ್ಮ ಕುಟುಂಬದವರೆಲ್ಲರೂ ಆನೆಯ ಒಡನಾಟದಲ್ಲಿಯೇ ಬೆಳೆದೆವು. ಪ್ರತಿದಿನ ಆನೆಗಳ ಭಾಷೆಗಳನ್ನ ಅರಿತು ಬಾಂಧವ್ಯ ಬೆಳೆಯಿತು, ಆನೆಗಳು ನಮ್ಮನ್ನ ಕಂಡರೆ ಸಾಕು ಪ್ರೀತಿ ಮಮತೆ ತೋರಿಸುತ್ತವೆ. ಪೂಜಾಕೈಂಕರ್ಯ ಸಲ್ಲಿಸುವಾಗ ಮಂತ್ರಗಳನ್ನು ಹೇಳುವ ಸಂಧರ್ಭದಲ್ಲಿ ಆನೆಯ ಭಾಷೆಗಳ ಮೂಲಕ ಮಾತನಾಡಿಸಿದಾಗ ಗಜಪಡೆ ಬಹಳ ಶಾಂತಿಯಿಂದ ಭಕ್ತಿಪೂರ್ವಕವಾಗಿ ಭಾಗವಹಿಸುತ್ತವೆ ಎಂದರು.
ಇದೇ ಸಂದರ್ಭದಲ್ಲಿ ಅರ್ಚಕರ ಸಂಘದ ಅಧ್ಯಕ್ಷರಾದ ವಿದ್ವಾನ್ ಕೃಷ್ಣಮೂರ್ತಿ, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಮೈಸೂರು ರಕ್ಷಣಾ ವೇದಿಕೆಯ ಕಾರ್ಯದರ್ಶಿ ರಾಕೇಶ್ ಭಟ್, ಅಜಯ್ ಶಾಸ್ತ್ರಿ, ಎಸ್ ಎನ್ ರಾಜೇಶ್, ರಾಕೇಶ್ ಕುಂಚಿಟಿಗ, ಸತೀಶ್, ಶರತ್, ಲಿಂಗರಾಜು ಹಾಗೂ ಇನ್ನಿತರರು ಹಾಜರಿದ್ದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…