News Karnataka Kannada
Tuesday, April 30 2024
ಮೈಸೂರು

ಮೈಸೂರು: ಜ.18 ರಿಂದ ಮೈಸೂರಿನಲ್ಲಿ ಬುಡಕಟ್ಟು ಯುವಜನ ವಿನಿಮಯ ಕಾರ್ಯಕ್ರಮ

Tribal Youth Exchange in Mysuru from Jan. 18
Photo Credit : By Author

ಮೈಸೂರು: ಕೇಂದ್ರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ, ನೆಹರೂ ಯುವ ಕೇಂದ್ರ ಸಂಘಟನೆ ಹಾಗೂ ಗೃಹ ಮಂತ್ರಾಲಯದ ಸಹಯೋಗದಲ್ಲಿ 14ನೇ ಬುಡಕಟ್ಟು ಯುವಜನ ವಿನಿಮಯ ಕಾರ್ಯಕ್ರಮವನ್ನು ಜ.18ರಿಂದ ಜ.24ರವರೆಗೆ ಇಲ್ಲಿನ ಮಾನಸಗಂಗೋತ್ರಿಯ ಲಲಿತಕಲಾ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮಹಾರಾಷ್ಟ್ರ, ಒಡಿಸ್ಸಾ, ತೆಲಂಗಾಣ, ಛತ್ತೀಸಗಡ, ಜಾರ್ಖಂಡ್, ಬಿಹಾರ ರಾಜ್ಯಗಳ ಆಯ್ದ ಬುಡಕಟ್ಟು ಯುವಜನರು (220) ಪಾಲ್ಗೊಳ್ಳಲಿದ್ದಾರೆ. ಉದ್ಘಾಟನೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭ 24ರಂದು ನಡೆಯಲಿದ್ದು, ಜಿಲ್ಲಾ  ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಸಿ.ನಾರಾಯಣಗೌಡ ಭಾಗವಹಿಸಲಿದ್ದಾರೆ.

ಬುಡಕಟ್ಟು ಯುವಜನರಿಗೆ ಬೇರೆ ಬೇರೆ ರಾಜ್ಯಗಳ ಸಂಸ್ಕೃತಿ, ಕಲೆ, ಆಹಾರ ಪದ್ಧತಿ, ಆಚಾರ-ವಿಚಾರ, ಭಾಷೆ ಕಲಿಕೆ, ಉಡುಗೆ- ತೊಡುಗೆ, ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಚಯಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಅವರನ್ನು ಜ.21ರಂದು ಚಾಮುಂಡಿಬೆಟ್ಟ, ಮೈಸೂರು ಅರಮನೆ, ಇನ್ಫೊಸಿಸ್ ಕ್ಯಾಂಪಸ್, ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ಗೆ ಕರೆದೊಯ್ಯಲಾಗುವುದು ಎಂದು ನೆಹರೂ ಯುವ ಕೇಂದ್ರ ಸಂಘಟನೆಯ ಕ್ಷೇತ್ರೀಯ ನಿರ್ದೇಶಕ ಎಂ.ಎನ್.ನಟರಾಜ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು