News Karnataka Kannada
Sunday, April 28 2024
ಮೈಸೂರು

ಮೈಸೂರು: ಖಾಸಗಿ ಬಸ್, ಇನೋವಾ ಕಾರು ನಡುವೆ ಭೀಕರ ಅಪಘಾತ – 10 ಮಂದಿ ದುರ್ಮರಣ

10 killed in accident between private bus and Innova car
Photo Credit : News Kannada

ನರಸೀಪುರ: ಮಲೆ ಮಾದೇಶ್ವರ ಬೆಟ್ಟದಿಂದ ಮೈಸೂರಿನ ಕಡೆ ತೆರಳುತ್ತಿದ್ದ ಇನ್ನೋವಾ ಕಾರು ಹಾಗೂ ಮೈಸೂರಿನಿಂದ ಕೊಳ್ಳೇಗಾಲದ ಕಡೆ ಬರುತ್ತಿದ್ದ ಖಾಸಗಿ ಬಸ್ ಗೆ ಕುರುಬೂರು ಸಮೀಪ ಮುಖಾಮುಖಿ ಡಿಕ್ಕಿಯಾಗಿ 10 ಜನರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಇನ್ನು ಭೀಕರ ಅಪಘಾತದಲ್ಲಿ ಸಾವಿಗೀಡಾಗಿರುವವರು ಬಳ್ಳಾರಿ ಮೂಲದವರು ಎಂದು ತಿಳಿದುಬಂದಿದೆ. ಕಬ್ಬು ಕಟಾವು ಮಾಡುವ ಕೂಲಿ ಆರಸಿ ಬಳ್ಳಾರಿಯಿಂದ ಮೈಸೂರಿನ ಕಡೆ ಬಂದಿದ್ದ ಬಡ ಜೀವಿಗಳು ಬಾರದ ಲೋಕಕ್ಕೆ ತೆರಳಿವೆ. ಬಾಡಿಗೆ ವಾಹನದ ಮೂಲಕ ಮಹದೇಶ್ವರ ಬೆಟ್ಟಕ್ಕೆ ದೇವಸ್ಥಾನಕ್ಕೆ ತೆರಳಿ ಪೂಜಿ ಸಲ್ಲಿಸಿ ಮೈಸೂರಿನ ಕಡೆ ಹಿಂತಿರುಗುವಾಗ ನರಸೀಪುರ ತಾಲೂಕಿನ ಕುರುಬೂರು ಸಮೀಪದಲ್ಲಿ ಈ ಘಟನೆ ನಡೆದಿದೆ. ಕಾರು ಸಂಪೂರ್ಣ ನಜ್ಜು ಗುಜ್ಜಗಿದೆ.

ಕಾರು ಮತ್ತು ಬಸ್ಸು ಅತೀ ವೇಗದ ಚಾಲನೆ ಕಾರಣ ಎಂದು ತಿಳಿದು ಬಂದಿದೆ.ಇನ್ನು ಸ್ಥಳೀಯ ಪೊಲೀಸ್ ಠಾಣಿಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು