ಮೈಸೂರು: ನಗರದ ಯಾದವಗಿರಿಯ ದಾಸ್ ಪ್ರಕಾಶ್ ಹೋಟೆಲ್ ನಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಆಯೋಜಿಸಿದ್ದ 15 ವರ್ಷ ಒಳಪಟ್ಟ ಬಾಲಕಿಯರ ಮುಕ್ತ ಚೆಸ್ ಪಂದ್ಯಾವಳಿಗೆ ಯುವಜನ ಮತ್ತು ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಡಾ.ಕೆ.ಸುರೇಶ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಮಾನಸಿಕವಾಗಿ ಮಕ್ಕಳನ್ನು ಸದೃಢಗೊಳಿಸಲು ಚೆಸ್ ಉತ್ತಮ ಕ್ರೀಡೆಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಕ್ರೀಡೆಯನ್ನು ಪ್ರೋತ್ಸಾಹಿಸಲು ಸಾಕಷ್ಟು ಯೋಜನೆಗಳನ್ನು ರೂಪಿಸಿವೆ. ಜತೆಗೆ ಇದರ ಮೂಲಕವೂ ಮಕ್ಕಳು ಭವಿಷ್ಯ ರೂಪಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಹೆಚ್ಚಿನ ಪೋಷಕರು ಇದನ್ನು ಅರ್ಥಮಾಡಿಕೊಂಡು ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಬೇಕು ಎಂದರು.
ಎರಡು ದಿನಗಳ ಕಾಲ ಪಂದ್ಯಾವಳಿ ನಡೆಯಲಿದ್ದು, ಜೂ.16 ರ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಆಗಲಿದೆ. ರೋಟೊರಿಯನ್ ಗಳಾದ ಶಂಕುತಲಾ,ವಿಕ್ರಮ್ ದಾಸ್, ಪಂದ್ಯಾವಳಿ ಯ ಅಸೋಸಿಯೇಷನ್ ನ ಉಪಾಧ್ಯಕ್ಷ ನಾಗೇಂದ್ರ, ಮುರುಳೀದರ್ ಇದ್ದರು.