News Karnataka Kannada
Monday, April 29 2024
ಮೈಸೂರು

ಮೈಸೂರು: ಎರಡು ದಿನಗಳ ಚೆಸ್ ಪಂದ್ಯಾವಳಿಗೆ ಚಾಲನೆ

Untitled 2 Recovered Recovered Recovered
Photo Credit :

ಮೈಸೂರು:  ನಗರದ ಯಾದವಗಿರಿಯ ದಾಸ್ ಪ್ರಕಾಶ್ ಹೋಟೆಲ್ ನಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಆಯೋಜಿಸಿದ್ದ 15 ವರ್ಷ ಒಳಪಟ್ಟ ಬಾಲಕಿಯರ ಮುಕ್ತ ಚೆಸ್ ಪಂದ್ಯಾವಳಿಗೆ ಯುವಜನ ಮತ್ತು ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಡಾ.ಕೆ.ಸುರೇಶ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಮಾನಸಿಕವಾಗಿ ಮಕ್ಕಳನ್ನು ಸದೃಢಗೊಳಿಸಲು ಚೆಸ್ ಉತ್ತಮ ಕ್ರೀಡೆಯಾಗಿದೆ‌. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಕ್ರೀಡೆಯನ್ನು  ಪ್ರೋತ್ಸಾಹಿಸಲು ಸಾಕಷ್ಟು ಯೋಜನೆಗಳನ್ನು ರೂಪಿಸಿವೆ. ಜತೆಗೆ ಇದರ ಮೂಲಕವೂ ಮಕ್ಕಳು ಭವಿಷ್ಯ ರೂಪಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಹೆಚ್ಚಿನ ಪೋಷಕರು ಇದನ್ನು ಅರ್ಥಮಾಡಿಕೊಂಡು ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಬೇಕು ಎಂದರು.

ಎರಡು ದಿನಗಳ ಕಾಲ ಪಂದ್ಯಾವಳಿ ನಡೆಯಲಿದ್ದು, ಜೂ.16 ರ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಆಗಲಿದೆ. ರೋಟೊರಿಯನ್ ಗಳಾದ  ಶಂಕುತಲಾ,ವಿಕ್ರಮ್ ದಾಸ್, ಪಂದ್ಯಾವಳಿ ಯ ಅಸೋಸಿಯೇಷನ್ ನ ಉಪಾಧ್ಯಕ್ಷ ನಾಗೇಂದ್ರ, ಮುರುಳೀದರ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು