News Karnataka Kannada
Tuesday, April 30 2024
ಮೈಸೂರು

ಮೈಸೂರು: ಸಾವಯವ ಕೃಷಿಯಲ್ಲಿ ಶುಂಠಿ ಬೆಳೆಯಲು ಮನವಿ

Appeal for growing ginger in organic farming
Photo Credit :

ಮೈಸೂರು: ಕೇರಳದಿಂದ ಬಂದು ಕರ್ನಾಟಕದಲ್ಲಿ ಬೆಳೆಯುತ್ತಿರುವ ಶುಂಠಿ ಬೆಳೆಗಾರರಿಗೆ ಮುಂದಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ನಿಷೇಧ ಮಾಡಿ, ಸಾವಯವ ಕೃಷಿಯಲ್ಲಿ ಶುಂಠಿಯನ್ನು ಬೆಳೆಯಬೇಕು ಹಾಗೂ ಕೇರಳ ರಾಜ್ಯದ ಮಾದರಿಯಲ್ಲೇ, ಕರ್ನಾಟಕ ರಾಜ್ಯದಲ್ಲಿ ಕೂಡ ಮಣ್ಣಿನ ಫಲವತ್ತತೆಗೆ ಹೆಚ್ಚಿನ ಆದ್ಯತೆ ಕೊಡಬೇಕೆಂದು ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಧ್ಯಕ್ಷ ಸಿ.ಚಂದನ್ ಗೌಡ ಮನವಿ ಮಾಡಿದ್ದಾರೆ.

ಕೇರಳ ರಾಜ್ಯದ ಶುಂಠಿ ಬೆಳೆಗಾರರ ಅಧ್ಯಕ್ಷ ಫಿಲಿಪ್ ಜಾರ್ಜ್ ಅವರನ್ನು ಭೇಟಿ  ಮಾಡಿ ಮನವಿ ಸಲ್ಲಿಸಿದ   ಸಿ.ಚಂದನ್ ಗೌಡ ಅವರು ಸಾವಯವ ಕೃಷಿಗೆ ಸಂಬಂಧಿಸಿದಂತೆ ಚರ್ಚಿಸಿದರು. ರಾಸಾಯನಿಕ ಮುಕ್ತ ಮಾಡುವುದರ ಜೊತೆಗೆ ಸಾವಯವದ  ಸಾಂಪ್ರದಾಯಿಕ ಕೃಷಿಗೆ ಹೆಚ್ಚಿನ ಒತ್ತು ಕೊಟ್ಟು  ಶುಂಠಿ ಬೆಳೆಯನ್ನ ಬೆಳೆಯಬೇಕು ಎಂಬ ಪ್ರಸ್ತಾವನೆ ಹಾಗೂ ಮನವಿ ಸಲ್ಲಿಸಿದ ವೇಳೆ  ಇದಕ್ಕೆ  ಸ್ಪಂದಿಸಿದ ಫಿಲಿಪ್ ಜಾರ್ಜ್ ಅವರು, ಕೇರಳದಲ್ಲೂ ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ, ಅಲ್ಲಿನ ರೈತರಲ್ಲೂ ಈ ಕುರಿತು ಜಾಗೃತಿ ಮೂಡಿಸುವುದಾಗಿ ಮುಂದಿನ ದಿನಗಳಲ್ಲಿ ಕೇರಳ ರಾಜ್ಯದ ಸಾವಯವ ಕೃಷಿಯ ರೈತರಿಗೆ ರೈತ ಕಲ್ಯಾಣ ಸಂಘದಿಂದ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶುಂಠಿ ಬೆಳೆಗಾರರ ಸಂಘದ ಅಧ್ಯಕ್ಷ ಫೀಲಿಪ್ಸ್ ಜಾರ್ಜ್ ಅವರು, ರೈತ ಕಲ್ಯಾಣ ಸಂಘದ ಉದ್ದೇಶಗಳನ್ನು ಸ್ವಾಗತಿಸಿದರಲ್ಲದೇ, ಮುಂದಿನ ದಿನಗಳಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಒತ್ತುಕೊಟ್ಟು ರಾಸಾಯನಿಕ ಕೃಷಿಯನ್ನು ಸಂಪೂರ್ಣ ತ್ಯಜಿಸುವ ಪ್ರಯತ್ನಕ್ಕೆ ಮುಂದಾಗುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ಹೇಮಂತ್ ಗೌಡ, ಹರೀಶ್ ಗೌಡ, ಸ್ವಾಮಿಗೌಡ, ಗೋವರ್ಧನ್, ಮೂರ್ತಿ, ವೇಣು, ನವೀನ ಗೌಡ, ರಘು,ಅಭಿ ಮತ್ತು ಸಂಜಯ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು