News Karnataka Kannada
Monday, April 29 2024
ಮೈಸೂರು

ಮೈಸೂರು: ವರುಣಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿಪೂಜೆ

Bhoomi pujan for development works in Varuna constituency
Photo Credit : By Author

ಮೈಸೂರು: ವರುಣಾ ಕ್ಷೇತ್ರಕ್ಕೆ ಸೇರುವ ವಿವಿಧ ಗ್ರಾಮಗಳ 43 ಕೋಟಿ ರೂ. ವೆಚ್ಚದ ಹಲವು ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ ಭೂಮಿಪೂಜೆ ನೆರವೇರಿಸಿದ್ದಾರೆ.

ಈ ವೇಳೆ  ಮಾತನಾಡಿದ ಅವರು, ಈ ಹಿಂದಿನಿಂದಲೂ ನಮ್ಮ ವರುಣಾ ಕ್ಷೇತ್ರದಲ್ಲಿ ರಾಜಕೀಯದಲ್ಲಿ ಸಕ್ರಿಯವಾಗಿದ್ದ ನನ್ನ ಸಹೋದರ ರಾಕೇಶ್‌ರವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ನಮ್ಮ ತಂದೆ ಸಿದ್ದರಾಮಯ್ಯ ಹಾಗೂ ತಾಯಿಯವರಿಗೆ ರಾಕೇಶ್ ನಿಧನದ ದುಖಃವನ್ನು ಸ್ವಲ್ಪ ಮಟ್ಟಿಗಾದರೂ ಕಡಿಮೆ ಮಾಡಬೇಕೆಂದು ಮತ್ತು ನಮ್ಮ ತಂದೆ ಸಿದ್ದರಾಮಯ್ಯರವರ ಆಸೆಯಂತೆ ಹಳ್ಳಿಗಳು ಅಭಿವೃದ್ದಿಯಾದರೆ ದೇಶದ ಅಭಿವೃದ್ದಿಯಾದಂತೆ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಅವರ ಕ್ಷೇತ್ರದ ಅಭಿವೃದ್ದಿಗೆ ಸಹಾಯ ಮಾಡಲು ನಿರ್ಧರಿಸಿ ನಾನು ಕ್ಷೇತ್ರದ ಮುಖಂಡರುಗಳು ಹಾಗೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಚುನಾವಣೆಗೆ ಸ್ಪರ್ಧಿಸಿದೆ ಎಂದರು.

ನನಗೆ ಕ್ಷೇತ್ರದ ಕಾಂಗ್ರೇಸ್ ಮುಖಂಡರು  ಹಾಗೂ ಕಾರ್ಯಕರ್ತರು  ನೀಡಿದಂತಹ ಸಹಕಾರವನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ, ನಿಷ್ಟೆಯಿಂದ, ಶ್ರದ್ದೆಯಿಂದ ಚುನಾವಣೆಯಲ್ಲಿ ನಾನು ಗೆಲ್ಲಲು ಕಾರಣ ಕರ್ತರಾದರು ಎಂದರಲ್ಲದೇ ಶೀಘ್ರದಲ್ಲೇ ವಿಧಾನ ಸಭಾ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಕಷ್ಟಪಟ್ಟು ತಂದಿರುವ ಅನುದಾನಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಒಂದೇ ಕಡೆಯಲ್ಲಿ ಹಲವು ಗ್ರಾಮಗಳ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಿದರಾಮಯ್ಯರವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಭಿವೃದ್ದಿ ಕಾಮಗಾರಿಗಳಿಗೆ ಅವರ ಮಾರ್ಗದರ್ಶನದಲ್ಲಿ ನನ್ನ ಅವಧಿಯಲ್ಲಿ ಸುಮಾರು ಕ್ಷೇತ್ರಕ್ಕೆ 400 ಕೋಟಿ ರೂ.ಗಳ ಅನುದಾನ ತಂದು ವಿವಿಧ ಅಬಿವೃದ್ದಿ ಕಾಮಗಾರಿಗಳನ್ನು ನೆರವೇರಿಸಿದ್ದೇನೆ, ಉಳಿದಿರುವ ಕಾಮಗಾರಿಗಳನ್ನು ಚುನಾವಣೆಯ ನಂತರ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರಲ್ಲದೇ, ಶಾಸಕನಾಗಿ ನಾನು ಇಲ್ಲಿಯವರೆಗೆ ಮಾಡಿರುವ ಕಾರ್ಯ ತೃಪ್ತಿ ತಂದಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು, ಬ್ಲಾಕ್ ಕಾಂಗ್ರೇಸ್ ಅದ್ಯಕ್ಷರುಗಳಾದ ರಂಗಸ್ವಾಮಿ,  ಮುದ್ದೇಗೌಡ, ವರುಣಾ ಮಹೇಶ್, ವರಕೋಡು ಉಮೇಶ್, ಎ.ಪಿ.ಎಂ.ಸಿ ಸದಸ್ಯ ಸಿದ್ದರಾಮನಹುಂಡಿ ಬಸವರಾಜು, ಹಾ.ಉ.ಸ.ಸಂಘದ ಅಧ್ಯಕ್ಷ ಸಿದ್ದರಾಮು, ಕೀಳನಪುರ ಮಹದೇವಪ್ಪ, ಜಿ.ಪಂ ಮಾಜಿ ಅಧ್ಯಕ್ಷ ಕೆಂಪೀರಯ್ಯ, ಮುದ್ದರಾಮೇಗೌಡ, ಗ್ರಾ.ಪಂ ಅಧ್ಯಕ್ಷ ಸುವರ್ಣ, ಮಹದೇವಮ್ಮ, ಬಸವರಾಜು, ಭುಗತಗಳ್ಳಿ ಮಣಿ, ದಾಸನೂರು ನಾಗೇಶ್, ಕಲ್ಮಳ್ಳಿ ಸುರೇಶ್ ಬಾಬು, ಹೆಬ್ಯರಾಜು, ಗ್ರಾ.ಪಂ ಅಧ್ಯಕ್ಷ ಶಂಕರ್, ಪವಿತ್ರ, ಚಂದ್ರಶೇಖರ್ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು