News Karnataka Kannada
Tuesday, April 30 2024
ಮೈಸೂರು

ಮೈಸೂರು: ವರುಣಾದಲ್ಲಿ ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ರಣತಂತ್ರ

ಕರ್ನಾಟಕದ ಮುಕುಟ ಬೀದರ ಲೋಕಸಭೆ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಸಮಾನ ನೆಲೆ ಒದಗಿಸಿದ ಕ್ಷೇತ್ರ. ಸತತ ಐದು ಬಾರಿ, ಹ್ಯಾಟ್ರಿಕ್‌ ಗೆಲುವು ಮತ್ತು ಮಾಜಿ ಸಿಎಂ ಸೇರಿ ಘಟಾನುಘಟಿಗಳ ಸ್ಪರ್ಧೆಯಿಂದ ರಾಜಕಾರಣದ ಗಮನ ಸೆಳೆದಿರುವ ಈ ಕ್ಷೇತ್ರ ಈವರೆಗೆ 18 ಚುನಾವಣೆಗಳನ್ನು ಎದುರಿಸಿದ್ದು, ಆಯ್ಕೆಯಾದದ್ದು ಕೇವಲ 6 ಜನರಷ್ಟೇ.
Photo Credit : Facebook

ಮೈಸೂರು: ವರುಣಾದಿಂದ ಸ್ಪರ್ಧಿಸುವ ಬಗ್ಗೆ ಘೋಷಿಸಿರುವ ಸಿದ್ದರಾಮಯ್ಯ, ಅವರನ್ನು ಸೋಲಿಸಲು  ಸೋಲಿಸಲು ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದೆ.

ಈ ಬಗ್ಗೆ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಈ ಹಿಂದೆಯೇ ಮಾತನಾಡಿದ್ದು, ಸಿದ್ದರಾಮಯ್ಯ ಎಲ್ಲೇ ಇದ್ದರೂ ಅವರನ್ನು ಸೋಲಿಸಲು ಎಲ್ಲರೂ ಒಂದಾಗುತ್ತಾರೆ ಎಂದು ಈ ಹಿಂದೆಯೇ ತಿಳಿಸಿದ್ದರು.

ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ಒಂದಾಗಿವೆ. ಅವರು ಒಟ್ಟಾಗಿ ಪಿತೂರಿ ಮಾಡುತ್ತಾರೆ. ತಂದೆಗೆ 76 ವರ್ಷ ವಯಸ್ಸು. ಇದು ಅವರ ಕೊನೆಯ ಚುನಾವಣೆ. ತಂದೆ ಗೆಲ್ಲಬೇಕು ಮತ್ತು ಘನತೆಯಿಂದ ನಿವೃತ್ತರಾಗಬೇಕು. ಚುನಾವಣೆ ವೇಳೆ ಎಚ್ಚರಿಕೆಯಿಂದ ಇರುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದ್ದರು.

ಕ್ಷೇತ್ರದಲ್ಲಿ ಒಟ್ಟು 48 ಸಾವಿರ ದಲಿತ ಮತಗಳಿವೆ, ಒಕ್ಕಲಿಗ ಸಮುದಾಯದಿಂದ 12 ಸಾವಿರ ಮತ್ತು ಕುರುಬ ಸಮುದಾಯದಿಂದ 27 ಸಾವಿರ ಮತಗಳಿವೆ. ಇದಲ್ಲದೆ, ಉಪ್ಪಾರ ಸಮುದಾಯಕ್ಕೆ ಸೇರಿದ 14 ಸಾವಿರ ಮತಗಳು ಮತ್ತು ಎಸ್ಟಿ ಸಮುದಾಯಕ್ಕೆ ಸೇರಿದ 23 ಸಾವಿರ ಮತಗಳಿವೆ. ಮುಸ್ಲಿಂ ಸಮುದಾಯ 15 ಸಾವಿರ ಮತಗಳನ್ನು ಹೊಂದಿದ್ದರೆ, ಇತರರು 35 ಸಾವಿರ ಮತಗಳನ್ನು ಹೊಂದಿದ್ದಾರೆ. ಹೀಗಾಗಿ, ಬಿಜೆಪಿ ಜಾತಿಯ ಆಧಾರದ ಮೇಲೆ ದೊಡ್ಡ ಕಾರ್ಯತಂತ್ರವನ್ನು ರೂಪಿಸಿದೆ.

ವರುಣಾ ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಮೂಲಕ ಸಿದ್ದರಾಮಯ್ಯ ಅವರಿಗೆ ಶಾಕ್ ನೀಡಲು ಬಿಜೆಪಿ ಯೋಜಿಸುತ್ತಿದೆ. ಬಿಜೆಪಿಗೆ ಅವರ ವಿರುದ್ಧ ಇರುವ ಜೆಡಿಎಸ್ ನಾಯಕರ ಬೆಂಬಲ ದೊರೆತಿದ್ದು, ಅವರನ್ನು ಸೋಲಿಸಲು ಯೋಜನೆ ರೂಪಿಸಲಾಗಿದೆ. ಅಷ್ಟೇ ಅಲ್ಲ, ಲಿಂಗಾಯತ ಮತಗಳು ಮತ್ತು ದಲಿತ ಮತಗಳನ್ನು ಸೆಳೆದು ಸಿದ್ದರಾಮಯ್ಯ ಅವರಿಗೆ ಸೋಲಿನ ರುಚಿ ತೋರಿಸುವುದು ಬಿಜೆಪಿಯ ತಂತ್ರವಾಗಿದೆ.

ಈ ಹಿಂದೆ ಬಿ.ವೈ.ವಿಜಯೇಂದ್ರ ಅವರ ಮೂಲಕ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ನಾಯಕರು ಯೋಜಿಸಿದ್ದರು. ಆದರೆ, ಅಂತಿಮವಾಗಿ ವಿಜಯೇಂದ್ರ ವರುಣಾದಿಂದ ಸ್ಪರ್ಧಿಸುವುದಿಲ್ಲ ಎಂಬುದು ಖಚಿತವಾಗಿದೆ. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸಾರ್ವತ್ರಿಕ ಚುನಾವಣೆ ಘೋಷಣೆಯಾದ ನಂತರ ವರುಣಾದಲ್ಲಿ ಕದನ ತೀವ್ರಗೊಂಡಿದೆ. ಸಿದ್ದರಾಮಯ್ಯ ಅವರಿಗೆ ತಮ್ಮದೇ ಕ್ಷೇತ್ರದಲ್ಲಿ ಮಾಸ್ಟರ್ ಸ್ಟ್ರೋಕ್ ನೀಡಲು ಕೇಸರಿ ಬ್ರಿಗೇಡ್ ಎಲ್ಲಾ ತಂತ್ರಗಳನ್ನು ರೂಪಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು