ಮೈಸೂರು: ಮೈಸೂರು ಜಿಲ್ಲೆಯಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬರ ಸಾವಿಗೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಇಲಾಖೆಯ 17 ಅಧಿಕಾರಿಗಳ ವಿರುದ್ಧ ಕರ್ನಾಟಕ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಗುಂಡ್ರೆ ಮೀಸಲು ಅರಣ್ಯ ಸಂರಕ್ಷಣಾಧಿಕಾರಿ ಅಮೃತೇಶ್, ಉಪ ವಲಯ ಅರಣ್ಯಾಧಿಕಾರಿ ಕಾರ್ತಿಕ್ ಯಾದವ್, ಸಿಬ್ಬಂದಿಗಳಾದ ಆನಂದ್, ಬಾಹುಬಲಿ, ರಾಮು, ಶೇಖರಯ್ಯ, ಸದಾಶಿವ, ಮಂಜು, ಉಮೇಶ್, ಸಂಜಯ್, ರಾಜಾ ನಾಯ್ಕ್, ಸುಷ್ಮಾ, ಮಹಾದೇವಿ, ಅಯ್ಯಪ್ಪ, ಸೋಮಶೇಖರ್, ತಂಗಮಣಿ ಮತ್ತು ಸಿದ್ದೀಕ್ ಪಾಷಾ ವಿರುದ್ಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಗುಂಡ್ರೆ ಮೀಸಲು ಅರಣ್ಯದ ಬಳಿಯ ಹಿಸಹಳ್ಳಿ ಹಾಡಿಯ ನಿವಾಸಿ 41 ವರ್ಷದ ಕರಿಯಪ್ಪ ಅವರ ಸಾವಿಗೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು.
ಮೀಸಲು ಅರಣ್ಯದಲ್ಲಿ ಜಿಂಕೆಯನ್ನು ಕೊಂದಿದ್ದಾರೆ ಎಂದು ಆರೋಪಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರ ಕರಿಯಪ್ಪ ಮತ್ತು ಇತರ ಇಬ್ಬರನ್ನು ವಶಕ್ಕೆ ಪಡೆದು ಅಕ್ರಮ ಬಂಧನದಲ್ಲಿಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
41 ವರ್ಷದ ಬುಡಕಟ್ಟು ವ್ಯಕ್ತಿಯ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಕಸ್ಟಡಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಅನಾರೋಗ್ಯಕ್ಕೆ ಒಳಗಾದಾಗ, ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಗಾಯಗೊಂಡು ನಿಧನರಾದರು.
ಕರಿಯಪ್ಪ ಅವರ ಸಾವು ಕೊಲೆ ಎಂದು ಆರೋಪಿಸಿದ ಸ್ಥಳೀಯ ಬುಡಕಟ್ಟು ಜನರು ಅರಣ್ಯ ಇಲಾಖೆಯ ಮುಂದೆ ಪ್ರತಿಭಟನೆ ನಡೆಸಿದರು.