ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಯನ್ನು ಅಂಬಾರಿಯಲ್ಲಿ ಹೊತ್ತು ಸಾಗಲು ದಸರಾ ಗಜಪಡೆ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಈ ಬಾರಿ 9 ಆನೆಗಳಿಗೆ ದಸರಾ ಗಜಪಡೆಯಲ್ಲಿ ಸ್ಥಾನ ನೀಡಲಾಗಿದೆ. ದಸರಾ ಮಹೋತ್ಸವಕ್ಕೆ ಮೈಸೂರಿಗೆ ಆಗಮಿಸುವ ಗಜಪಡೆಯ ಮೊದಲ ಪಟ್ಟಿ ತಯಾರಾಗಿದೆ. ಮೊದಲ ಹಂತದಲ್ಲಿ ಬರುವ 9 ಆನೆಗಳ ಪಟ್ಟಿಯನ್ನು ಅರಣ್ಯಾಧಿಕಾರಿಗಳು ಅಂತಿಮಗೊಳಿಸಿದ್ದಾರೆ. ಸೆಪ್ಟೆಂಬರ್ 1 ರ ಗಜ ಪಯಣದಲ್ಲಿ 9 ಆನೆಗಳು ವೀರನಹೊಸಹಳ್ಳಿಯಿಂದ ಅರಮನೆಗೆ ಆಗಮಿಸಲಿವೆ.
ನಾಗರಹೊಳೆ ಆನೆ ಶಿಬಿರದಿಂದ – 1) ಅಭಿಮನ್ಯು 2) ಭೀಮ 3) ಮಹೇಂದ್ರ., ನಾಗರಹೊಳೆಯ ಬಳ್ಳೆ ಆನೆ ಶಿಬಿರದಿಂದ – 4) ಅರ್ಜುನ, ದುಬಾರೆ ಆನೆ ಶಿಬಿರದಿಂದ – 5) ಧನಂಜಯ 6) ಗೋಪಿ., ಬಂಡೀಪುರದ ರಾಮಪುರ ಶಿಬಿರದಿಂದ – 7) ಪಾರ್ಥ ಸಾರಥಿ., ದುಬಾರೆ ಆನೆ ಶಿಬಿರದಿಂದ – 8) ವಿಜಯ., ಭೀಮನಕಟ್ಟೆ ಆನೆ ಶಿಬಿರದಿಂದ – 9) ವರಲಕ್ಷಿ ಆನೆಗಳು ಬರಲಿದೆ.