ಮೈಸೂರು: ಭಾರತ್ ಜೋಡೋ ಯಾತ್ರೆಗೆ ರಾಹುಲ್ ಭೇಟಿ ವೇಳೆ ನಗರದಲ್ಲಿ ಬಿಜೆಪಿ ನಾಯಕರು ಕಪ್ಪು ಬಾವುಟಗಳನ್ನು ಹಂಚಿದ್ದಾರೆ ಎಂದು ತಿಳಿದು ಬಂದಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಭಾನುವಾರ ಅಕ್ಟೋಬರ್ 2 ರಂದು ಇಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್, “ಈ ಸಂಬಂಧ ನಗರ ಪೊಲೀಸ್ ಆಯುಕ್ತರೊಂದಿಗೆ ಮಾತುಕತೆ ನಡೆಸುತ್ತೇನೆ. ಕಪ್ಪು ಬಾವುಟಗಳನ್ನು ತೋರಿಸುವುದು ಮತ್ತು ಕಲ್ಲು ತೂರಾಟ ಮಾಡುವುದ ರಿಂದ ಕಾಂಗ್ರೆಸ್ ಧೈರ್ಯವನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ. ಅವರು ಏನು ಬೇಕಾದರೂ ಮಾಡಲಿ ಎಂದರು.
ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಇಷ್ಟೆಲ್ಲ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.