ಮೈಸೂರು: ಮರಗಳನ್ನು ಬೆಳೆಸಿ ವೃಕ್ಷ ಮಾತೆ ಎಂದು ಖ್ಯಾತಿ, ಪರಿಸರ ರಾಯಭಾರಿ ಗೌರವದೊಂದಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಪಡೆದ ಸಾಲು ಮರದ ತಿಮ್ಮಕ್ಕ ಅವರನ್ನು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಜರ್ ಬಾದ್ ನಲ್ಲಿರುವ ಗೌರ್ನಮೆಂಟ್ ಗೆಸ್ಟ್ ಹೌಸ್ ನಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಅಭಿನಂದನೆ ಸಲ್ಲಿಸಿ ಮಾತನಾಡಿದ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಅವರು, ಸರ್ಕಾರ ಈಗಲಾದರೂ ಇವರ ಸೇವೆಯನ್ನು ಗುರುತಿಸಿ ಉತ್ತಮವಾದ ಸ್ಥಾನಮಾನ ನೀಡಿರುವುದು ನಿಜಕ್ಕೂ ಶ್ಲಾಘನೀಯ ಹಾಗೆಯೇ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ನಿಸ್ವಾರ್ಥ ಪರಿಸರ ಸೇವೆ ಮೂಲಕ ಬದುಕನ್ನೇ ಪರಿಸರಕ್ಕಾಗಿ ಮುಡಿಪಿಟ್ಟ ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ಅವರಿಗೆ ಲಭಿಸಿದ ಪ್ರಶಸ್ತಿಗಳು ಹಾಗೂ ಅವರ ಸಾಧನೆ ಬಿಂಬಿಸಲು ವಸ್ತು ಸಂಗ್ರಹಾಲಯ ನಿರ್ಮಿಸಲು ಸರ್ಕಾರ ಮುಂದಾಗಲಿ ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯರಾದ ಎಂ.ಡಿ. ಪಾರ್ಥಸಾರಥಿ, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಬಿಜೆಪಿ ಮಾಧ್ಯಮ ಪ್ರಮುಖ್ ಕೇಬಲ್ ಮಹೇಶ್, ಅಪೂರ್ವ ಸುರೇಶ್, ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ಶ್ರೀಕಾಂತ್ ಕಶ್ಯಪ್, ಶಿವು, ಮಹದೇವ್ ಪ್ರಸಾದ್ ಇನ್ನಿತರರು ಹಾಜರಿದ್ದರು.