ಮೈಸೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಎಸ್.ಸಿ.ಎಸ್.ಪಿ ಮತ್ತು ಟಿಎಸ್ಪಿ ಯೋಜನೆಗಳಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಫಾಯಿ ಕರ್ಮಚಾರಿ ಪೌರ ಕಾರ್ಮಿಕರು ಮತ್ತು ಮ್ಯಾನುಯೆಲ್ ಸ್ಕ್ಯಾವೆಂಜರ್ಸ್ ಹಾಗೂ ಅವರ ಅವಲಂಬಿತರ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಲಘು ಮತ್ತು ಭಾರಿ ವಾಹನ ತರಬೇತಿ ನೀಡಿ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಚಾಲನಾ ಅನುಜ್ಞಾ ಪತ್ರ ಲೈಸೆನ್ಸ್ ಅಥವಾ ಬ್ಯಾಡ್ಜ್ ನೀಡುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಹಮ್ಮಿಕೊಳ್ಳಲಾಗಿದೆ.
ತರಬೇತಿಯನ್ನು ಪಡೆಯಲು ಇಚ್ಚಿಸುವ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಭ್ಯರ್ಥಿಗಳು ಹೊಂದಿರಬೇಕಾದ ಕನಿಷ್ಠ ಅರ್ಹತೆಗಳು ಮತ್ತು ಸಲ್ಲಿಸಬೇಕಾದ ದಾಖಲೆಗಳ ವಿವರ: ಲಘು ವಾಹನ ಚಾಲನಾ ತರಬೇತಿ (ಕಾರು ಅಥವಾ ಜಿಪ್) ತರಬೇತಿ ಅವಧಿ 30 ದಿನಗಳು 18 ವರ್ಷ ಪೂರ್ಣಗೊಂಡಿರ ಬೇಕು ಜನನ ಪ್ರಮಾಣ ಪತ್ರ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಟಿಸಿ ನೋಟರಿಯಿಂದ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ 5 ಪಾಸ್ಪೋರ್ಟ್ ಅಳತೆಯ ಭಾವಚಿತ್ರ.
ಭಾರಿ ವಾಹನ ಚಾಲನಾ ತರಬೇತಿ (ಬಸ್) ತರಬೇತಿ ಅವಧಿ 30 ದಿನಗಳು ವಯಸ್ಸು ಕನಿಷ್ಠ 20 ವರ್ಷ ಪೂರ್ಣಗೊಂಡಿರ ಬೇಕು ಲಘು ವಾಹನ ಚಾಲನಾ ಅನುಜ್ಞಾ ಪತ್ರ ಲೈಸೆನ್ಸ್ ಪಡೆದು ಒಂದು ವರ್ಷ ಪೂರೈಸಬೇಕು ಜನನ ಪ್ರಮಾಣಪತ್ರ ಅಥವಾ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಟಿಸಿ ಪ್ರಮಾಣ ಪತ್ರ ಆಧಾರ್ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ 5 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಕಲಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.