Categories: ಮೈಸೂರು

ಮೈಸೂರು: ದಸರಾ ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ

ಮೈಸೂರು: ಈ ವರ್ಷದ ದಸರಾ ಮಹೋತ್ಸವಕ್ಕೆ 90 ದಿನಗಳು ಬಾಕಿ ಇದೆ. ಪ್ರವಾಸೋದ್ಯಮ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದ್ದೇನೆ ಎಂದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಪ್ರವಾಸೋದ್ಯಮವನ್ನು ಪ್ರವಾಸಿ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಅರಮನೆ ಮಂಡಳಿ ಮೈಸೂರಿಗೆ ಬರುವ ಪ್ರವಾಸಿಗರಿಗೆ ಸಮಸ್ಯೆಯಾದರೆ ಎಲ್ಲಿ ದೂರು ಕೊಡಬೇಕು ತಿಳಿಯುತ್ತಿಲ್ಲ. ಈ ಸಮಸ್ಯೆ ಪರಿಹಾರಕ್ಕೆ ಟೂರಿಸ್ಟ್ ಪೊಲೀಸ್ ಮಾಡಬೇಕಾ? ಅಗತ್ಯ ಇದೆಯಾ? ಎಂಬ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಹಾಗೆಯೇ ಮೈಸೂರಿಗೆ ಬರುವ ಪ್ರವಾಸಿಗರಿಗೆ ಟೂರಿಸ್ಟ್ ಪಾಸ್ ಕೊಡಲು ಚಿಂತನೆ ಮಾಡಲಾಗಿದೆ. ಇದರಿಂದ ಮೈಸೂರಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಲು ಅನುಕೂಲವಾಗಲಿದೆ ಎಂದರು.

ತಮ್ಮ ಇಲಾಖೆ ಅಧೀನದಲ್ಲಿರುವ ಜಂಗಲ್ ಅಂಡ್ ಲಾಡ್ಜಸ್‌ಗಳ ರೂಂ ಭರ್ತಿ ಪ್ರಮಾಣವನ್ನು ವಿದ್ಯಾರ್ಥಿಗಳು, ಹಿರಿಯ ನಾಗರಿಕರಿಗೆ ರಿಯಾಯಿತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಕೋವಿಡ್‌ನಿಂದ 2021ರಲ್ಲಿ 61 ಕೋಟಿ ರೂ. ಆದಾಯವಾಗಿದೆ. 2022-23ಕ್ಕೆ 111 ಕೋಟಿ ರೂ.ಗೆ ಏರಿಕೆಯಾಗಿದೆ. ಶೇ.47 ರೂಂಗಳಷ್ಟೇ ಭರ್ತಿಯಾಗುತ್ತಿವೆ. ಈ ಪ್ರಮಾಣವನ್ನು ಶೇ.75ಕ್ಕೆ ಏರಿಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ದರ ಹೆಚ್ಚಿದೆ. ವಿಶೇಷ ಪ್ಯಾಕೇಜ್ ಕೊಡಲಾಗದು. ಶೇ.75 ರೂಂ ಭರ್ತಿ ಕಷ್ಟವೆಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ರಾಷ್ಟ್ರೀಯ ಆಸ್ತಿ ಉಳಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ವಿಶೇಷ ಅಧಿಕಾರ ಕೊಟ್ಟಿದ್ದು, 2023-24ರಲ್ಲಿ ಶೇ.66 ಗುರಿ ಮುಟ್ಟುವಂತೆ ಹೇಳಿದ್ದೇನೆ ಎಂದು ವಿವರಿಸಿದರು.

ವಸ್ತುಪ್ರದರ್ಶನ ಪ್ರಾಧಿಕಾರ ಕೆಲಸದ ಅಸಮಾಧಾನ ವ್ಯಕ್ತಪಡಿಸಿದ್ದೇನೆ. 80 ಎಕರೆ ಜಾಗವನ್ನು ಉದ್ದೇಶಿತ ಕಾರಣಕ್ಕೆ ಬಳಸಲಾಗುತ್ತಿಲ್ಲ. ಹಾಗಾಗಿ ವರ್ಷಪೂರ್ತಿ ಅಲ್ಲಿ ಏನೇನು ಚಟುವಟಿಕೆ ಮಾಡಬಹುದು. ಪ್ರತಿ ಜಿಲ್ಲೆಯ ಸಂಸ್ಕೃತಿ ಪರಂಪರೆ ಪ್ರದರ್ಶನಕ್ಕೆ ಅವಕಾಶ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಕರ್ನಾಟಕ ವಸ್ತು ಪ್ರದರ್ಶನ ಬಲವರ್ಧನೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರ ಸಮಿತಿ ರಚನೆ ಮಾಡಲಾಗುವುದು. ಈ ತಂಡದ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೈಸೂರಿನ ಪಾರಂಪರಿಕ ಕಟ್ಟಡಗಳ ರಕ್ಷಣೆಗೆ ಒತ್ತು ಕೊಡಲಾಗುವುದು. ನಮ್ಮ ಸಂಸ್ಕೃತಿ ಇತಿಹಾಸ ಉಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ದಸರಾ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಎಸಿಎಸ್ ಕಪಿಲ್ ಮೋಹನ್, ಕಾರ್ಯದರ್ಶಿ ರಾಮ್ ವಿಲಾಸ್ ಪ್ರಸಾದ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ashika S

Recent Posts

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

24 mins ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

42 mins ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

1 hour ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

1 hour ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

2 hours ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

2 hours ago