Categories: ಮೈಸೂರು

ಮೈಸೂರು: ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ – ಎಸ್ ಪಿ ಸೀಮಾ ಲಾಟ್ಕರ್

ಮೈಸೂರು: ರಸ್ತೆಗಳ ಅಂಚಿನಲ್ಲಿರುವ ಶಾಲಾ ಹಾಗೂ ಕಾಲೇಜುಗಳ ಮಕ್ಕಳು ಒಟ್ಟಿಗೆ ಶಾಲಾ  ಕಾಲೇಜುಗಳಿಂದ ಹೊರ ಬರುವುದರಿಂದ ಮಕ್ಕಳಿಗೆ ತೊಂದರೆಯಾಗದಂತೆ ಅವರ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು.

ನಗರದ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ  ಅವರು, ರಸ್ತೆಗಳಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ರಸ್ತೆ ಬದಿಯಲ್ಲಿ ಇರುವ ಶಾಲೆಗಳ ಬಳಿ ಹೆಚ್ಚಿನ ನಿಗಾ ವಹಿಸಬೇಕು. ವಾಹನಗಳು ವೇಗವಾಗಿ ಬರುವುದರಿಂದ ಅಪಘಾತವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಅಧಿಕಾರಿಗಳು ಹೆಚ್ಚಿನ ಗಮನ ಕೊಡಬೇಕು. ನಿಮಿಷಗಳ ಅಂತರದಲ್ಲಿ ತರಗತಿವಾರು ಮಕ್ಕಳನ್ನು ಶಾಲೆಯಿಂದ ಬಿಡಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಹಾಗೂ ಗ್ರಾಮೀಣ ಭಾಗದಲ್ಲಿ 29 ಬ್ಲಾಕ್‌ಸ್ಪಾಟ್‌ಗಳನ್ನು ಹಾಗೂ ನಗರದಲ್ಲಿ 12  ಬ್ಲಾಕ್‌ಸ್ಪಾಟ್ ಗುರುತಿಸಲಾಗಿದೆ. ಮೂರಕ್ಕಿಂತ ಹೆಚ್ಚು ಅಪಘಾತಗಳಾಗುವ ಸ್ಥಳವನ್ನು ಬ್ಲಾಕ್‌ಸ್ಪಾಟ್  ಎಂದು ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ಉಂಟಾಗುವ ಅಪಘಾತಗಳನ್ನು ನಿಯಂತ್ರಿಸಲು ಸೂಕ್ತ ರಸ್ತೆ ಸುರಕ್ಷತಾ ವ್ಯವಸ್ಥೆ ಮಾಡಬೇಕೆಂದು  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಮಾರಣಾಂತಿಕ, ಮಾರಣಾಂತಿಕವಲ್ಲದ ಹಾಗೂ ಸಣ್ಣ ಅಪಘಾತಗಳ ಬಗ್ಗೆಯೂ ಸರಿಯಾದ ಮಾಹಿತಿ ನೀಡಬೇಕು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ  ನಿಗಮದ ಬಸ್ ಚಾಲಕರು ಅತಿ ವೇಗವಾಗಿ ವಾಹನ ಚಲಾಯಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದರಿಂದ ಬಹಳ ದೊಡ್ಡ ಮಟ್ಟದ ಅಪಘಾತಗಳಾಗುವ ಸಾಧ್ಯತೆಗಳಿವೆ. ಕೂಡಲೇ ಇದಕ್ಕೆ ಸಂಬಂಧಿಸಿದಂತೆ ಚಾಲಕರುಗಳಿಗೆ ನೀವು ಸೂಚನೆಗಳನ್ನು ನೀಡಿ ಅಥವಾ ಕ್ರಮ ಕೈಗೊಳ್ಳಿ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಜು, ಡಿಡಿಪಿಐ ರಾಮಚಂದ್ರರಾಜೇ  ಅರಸ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ್ರಾದೇಶಿಕ ಸಾರಿಗೆ ಅಧಿಕಾರಿ  ಹೇಮಂತ್ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ, ಪದವಿ  ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗಮಲ್ಲೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ  ಇಲಾಖೆಯ ಸಹಾಯಕ ನಿರ್ದೇಶಕ ಹರೀಶ್.ಟಿ.ಕೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು  ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago