ಮೈಸೂರು: ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಅಪರ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಮತ್ತು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ಅವರಿಂದ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧಕ್ಷರಾಗಿ ಶಿವಕುಮಾರ್ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಬಿಜೆಪಿ ಪಕ್ಷದಲ್ಲಿ 40 ವರ್ಷದಿಂದ ಮಾಡಿಕೊಂಡು ಬಂದಿರುವ ಸೇವೆ ಪರಿಗಣಿಸಿ ಪಕ್ಷದ ಹಿರಿಯರೆಲ್ಲರೂ ಸೇರಿ ವನ್ಯಜೀವಿಗಳ ಉಳಿವಿಗಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದು, ಅದಕ್ಕೆ ಸದಾ ಋಣಿಯಾಗಿ ಜವಾಬ್ದಾರಿ ನಿಭಾಯಿಸುವೆ ಎಂದು ಹೇಳಿದರು.
ಈ ಹಿಂದಿನ ಅಧಕ್ಷರು ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಅನೇಕ ಅಭಿವೃದ್ಧಿ ಕೆಲಸ ಪ್ರಗತಿಯಲ್ಲಿರುವುದಾಗಿ ಮೇಲ್ನೋಟದ ಮಾಹಿತಿಯಿದೆ. ಈ ಬಗ್ಗೆ ಶೀಘ್ರವೇ ಅಧಿಕಾರಿಗಳ ಸಭೆ ನಡೆಸಿ ರಾಜ್ಯದ 9ಮೃಗಾಲಯಗಳ ಅಭಿವೃದ್ಧಿ ಕುರಿತು ಕ್ರಮ ಕೈಗೊಳ್ಳುವ ಹಾಗೂ ಮತ್ತಷ್ಟು ಅನುದಾನ ಪಡೆಯುವ ನಿಟ್ಟಿನಲ್ಲಿಯೂ ಹೆಚ್ಚಿನ ಮಾಹಿತಿ ಪಡೆದು ಮುಂದೆ ತಿಳಿಸುವುದಾಗಿ ಹೇಳಿದರು.