News Karnataka Kannada
Monday, April 29 2024
ಮೈಸೂರು

ಮೈಸೂರು: ನಾಳೆ ಎರಡನೇ ವಂದೇ ಭಾರತ್‌ಗೆ ಚಾಲನೆ

Mysuru: The second Vande Bharat mission will be launched tomorrow.
Photo Credit : By Author

ಮೈಸೂರು: ಭಾರತೀಯ ರೈಲ್ವೆಯಲ್ಲಿಯೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಜೂ.27ರಂದು ಧಾರವಾಡ-ಕೆಎಸ್‌ಆರ್ ಬೆಂಗಳೂರು ನಗರಗಳ ನಡುವಿನ ಕರ್ನಾಟಕ ರಾಜ್ಯದ ಎರಡನೇ ವಂದೇ ಭಾರತ್ ರೈಲು ಸೇರಿದಂತೆ ಒಂದೇ ದಿನದಲ್ಲಿ ಐದು ವಂದೇ ಭಾರತ್ ಎಕ್ಸ್‌ಪ್ರೆಸ್ ಸೆಮಿ-ಹೈ ಸ್ಪೀಡ್ ರೈಲುಗಳನ್ನು ಆನ್‌ಲೈನ್ ಮುಖಾಂತರ ಉದ್ಘಾಟಿಸಲಿದ್ದಾರೆ.

ದಕ್ಷಿಣ ಭಾರತದ ಮೊತ್ತ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಆದ ಮೈಸೂರು-ಚೆನ್ನೈ ಮಾರ್ಗದಲ್ಲಿನ ಸೆಮಿ-ಹೈ-ಸ್ಪೀಡ್ ರೈಲಿನೊಂದಿಗೆ ಕರ್ನಾಟಕ ತನ್ನ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಪಡೆದಿತ್ತು. ಧಾರವಾಡ-ಕೆಎಸ್‌ಆರ್ ಬೆಂಗಳೂರು ನಗರಗಳ ನಡುವಿನ ಗಾಡಿಯು ಸಂಪೂರ್ಣವಾಗಿ ಕರ್ನಾಟಕದಲ್ಲಿಯೇ ಓಡಾಡುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಲಿದೆ. ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಯಶವಂತಪುರ, ದಾವಣಗೆರೆ ಮತ್ತು ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿವೆ.

ಉದ್ಘಾಟನಾ ವಿಶೇಷ ರೈಲು ಗಾಡಿ ಅಂದು ಬೆಳಗ್ಗೆ ಸುಮಾರು 10.35ಕ್ಕೆ ಧಾರವಾಡ ರೈಲು ನಿಲ್ದಾಣದಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ ಮತ್ತು ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತಿಪಟೂರು, ಅಮ್ಮಸಂದ್ರ, ತುಮಕೂರು, ದೊಡ್ಡಬೆಲೆ, ಚಿಕ್ಕಬಾಣಾವರ ಮತ್ತು ಯಶವಂತಪುರ ಜಂ. ಮಾರ್ಗವಾಗಿ ಚಲಿಸಿ ತನ್ನ ಗಮ್ಯಸ್ಥಾನ ತಲುಪಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು