ಮೈಸೂರು: ಚಪ್ಪರದಹಳ್ಳಿಯಲ್ಲಿ ಸಾಂಪ್ರದಾಯಿಕ ಓಕುಳಿ ಹಬ್ಬ

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದಲ್ಲಿ ಸಾಂಪ್ರದಾಯಿಕ ಓಕುಳಿ ಹಬ್ಬ ಸಡಗರ ಸಂಭ್ರಮದಿಂದ ನಡೆಯಿತು.

ಕಳೆದ ಎಂಟು ವರ್ಷದ ಬಳಿಕ ಓಕುಳಿ ಹಬ್ಬದ ಹಿನ್ನಲೆ ಶ್ರೀ ದೊಡ್ಡಮ್ಮ ಚಿಕ್ಕಮ್ಮ ತಾಯಿ ರಥೋತ್ಸವವು ನೂರಾರು ಭಕ್ತಾಧಿಗಳ ಸಮ್ಮುಖ ವಿಜೃಂಭಣೆಯಿಂದ ಜರುಗಿತು. ಶ್ರೀ ದೊಡ್ಡಮ್ಮ ಮತ್ತು ಚಿಕ್ಕಮ್ಮ ತಾಯಯ ಉತ್ಸವ  ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸಿ ನಂತರ ಗ್ರಾಮದ ಕುರ್ಜು ಸುತ್ತ ಪ್ರದಕ್ಷಣೆ ಹಾಕಿ ಬಳಿಕ ವಿವಿಧ  ಪುಷ್ಪಗಳಿಂದ ಅಲಂಕರಿಸಿದ ರಥದ ಮೇಲೆ ಪ್ರತಿಷ್ಠಾಪಿಸಿ ನಂತರ ಭಕ್ತಾಧಿಗಳುಮತ್ತು ಗ್ರಾಮಸ್ಥರು ಒಟ್ಟಾಗಿ ಸೇರಿ ರಥ  ಎಳೆಯುವ ಮೂಲಕ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು, ಈ ವೇಳೆ ಯುವಕರು ಹಾಗೂ ಗ್ರಾಮಸ್ಥರು ಕುಣಿದು ಕುಪ್ಪಳಿಸಿದರು.

ಓಕುಳಿ ಹಬ್ಬದ ಹಿನ್ನೆಲೆ ನಡೆದ ನೀರಿನ ಓಕುಳಿಯಲ್ಲಿ ಯುವಕರು ಹಾಗೂ ಗ್ರಾಮದ ಮುಖಂಡರು ಸೇರಿದಂತೆ ಹಲವಾರುಮಂದಿ ಪರಸ್ಪರ ಬಣ್ಣದ ನೀರನ್ನು ಎರಚಿ ತಮಟೆ ಶಬ್ದ ಹಾಗೂ ಚಲನ ಚಿತ್ರದ ಹಾಡಿಗೆ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು, ಹಬ್ಬದ ಹಿನ್ನೆಲೆ ಗ್ರಾಮದ ಪ್ರಮುಖ ವೃತ್ತಗಳಿಗೆ ವಿಶೇಷವಾಗಿ ದೀಪಾಲಕಾರ ಮಾಡಲಾಗಿತ್ತು, ಮಕ್ಕಳ ಆಟಿಕೆ ಸಾಮಾನು ಅಂಗಡಿ ಸೇರಿದಂತೆ ವಿವಿಧ ಬಗೆಯ ಅಂಗಡಿಗಳು ಅಂಗಡಿಗಳಲ್ಲಿ ಭರ್ಜರಿ ವ್ಯಾಪಾರ ನಡೆಯಿತು.

ಶ್ರೀ ಕೊಳ್ಳಿ ಮಲ್ಲಿಕಾರ್ಜುನ ಸ್ವಾಮಿ ಕೃಪಾಪೋಷಿತ ನಾಟಕ ಮಂಡಳಿಯವರು ಮಂಡ್ಯದ ಶ್ರೀ ಶಿವ ಡ್ರಾಮಾ ಸೀನರಿಯಲ್ಲಿ ಐಲಾಪುರ ಗ್ರಾಮದ ಎನ್. ರಾಜು ಅವರ ನಿರ್ದೇಶನ, ನಂಜನಗೂಡಿನ ಸೋಮರಾಜ್ ತಂಡದ ವಾದ್ಯ ಗೋಷ್ಠಿಯಲ್ಲಿ ಹೇಮಾವತಿ ಸ್ವಯಂವರ ಅಥವಾ ಶಿವಭಕ್ತ ಚಂಡಸುರನ ವಧೆ ಎಂಬ ಪೌರಾಣಿಕ ನಾಟಕ ಪ್ರದರ್ಶಿಸಿದರು.

Ashika S

Recent Posts

ಅಯೋದ್ಯೆಗೆ ಮೋದಿ ಬೇಟಿ : ರಾಮಲಲ್ಲಾನಿಗೆ ಸಾಷ್ಟಾಂಗ ನಮಸ್ಕಾರ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ…

22 mins ago

ಇಂದು ಈ ರಾಶಿಯವರಿಗೆ ನಿರೀಕ್ಷೆ ತಕ್ಕ ಫಲ ದೊರಕಲಿದೆ

ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ. ಆಪ್ತ ವ್ಯಕ್ತಿಗಳಿಗೆ ಸಹಾಯ ಮಾಡುವಿರಿ. ಮನೆಯಲ್ಲಿ ಕಲಹಗಳಿಗೆ ಆಸ್ಪದ ಕೊಡಬೇಡಿ. ಆರೋಗ್ಯ ಪರಿಪೂರ್ಣವಾಗಿರಲಿದೆ.…

35 mins ago

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

8 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

9 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

9 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

9 hours ago