News Karnataka Kannada
Sunday, April 28 2024
ಮೈಸೂರು

ಮೈಸೂರು: ಬಿಜೆಪಿಯಲ್ಲಿ ಕಿರುಕುಳ ನೀಡುವ ವಾತಾವರಣವಿಲ್ಲ ಎಂದ ಎಸ್.ಟಿ.ಸೋಮಶೇಖರ್

Amit Shah arrives in Karnataka, S.T. Somashekar reviews preparations
Photo Credit : By Author

ಮೈಸೂರು: ಬಿಜೆಪಿಯಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂಬ ಶಾಸಕ ಎಸ್.ಎ.ರಾಮದಾಸ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ನೂರಕ್ಕೆ ನೂರು ಕಿರುಕುಳ ನೀಡುವ ವಾತಾವರಣ ಇಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನು ಪಕ್ಷದಿಂದ ಬಿಡಿಸಲು ಕಿರುಕುಳ ನೀಡುತ್ತಿದ್ದಾರೆ ಎಂಬ ಶಾಸಕ ಎಸ್.ಎ.ರಾಮದಾಸ್ ಆರೋಪಿ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು. ರಾಮದಾಸ್ ಹಿರಿಯ ನಾಯಕರಾಗಿದ್ದು, ತಮ್ಮ ಸುದೀರ್ಘ ರಾಜಕಾರಣದಲ್ಲಿ ಯಾರಿಗೂ ಕಿರುಕುಳ ನೀಡಿಲ್ಲ. ಅವರು ಬೇರೆಯವರಿಗೆ ಕಿರುಕುಳ ನೀಡಿಲ್ಲ ಎಂದ ಮೇಲೆ ಅವರಿಗೆ ಯಾರು ಕಿರುಕುಳ ನೀಡುತ್ತಾರೆ ಎಂದು ಪ್ರಶ್ನಿಸಿದರು.

ಮಾಜಿ ಮಂತ್ರಿ ಹಾಗೂ ಅನುಭವ ರಾಜಕಾರಣಿಯಾಗಿರುವ ರಾಮದಾಸ್ ಅವರಿಗೆ ಯಾರು ಕೂಡ ಮನಸ್ಸು ನೋಯಿಸುವ ಕೆಲಸ ಮಾಡುವುದಿಲ್ಲ  ಎಂಬ ವಿಶ್ವಾಸ ಇದೆ. ನಾನು ಬಿಜೆಪಿಗೆ ಬಂದು ಮೂರು ವರ್ಷವಾಗಿದ್ದು,ನಾನು ಕಂಡಂತೆ ಬಿಜೆಪಿಯಲ್ಲಿ ಕಿರುಕುಳದ ವಾತಾವರಣ ಇಲ್ಲ. ರಾಮದಾಸ್ ನನಗಿಂತ ಹಳೆಯ ನಾಯಕರಾಗಿದ್ದು,  ಈ ಬಗ್ಗೆ ಅವರಿಗೆ ಚೆನ್ನಾಗಿ ತಿಳಿದಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು