ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಹಾಗೂ ಶ್ರೀ ಆದ್ಯ ಫೌಂಡೇಶನ್ ವತಿಯಿಂದ ಬೆಂಗಳೂರುನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಮಾಘ ಮಾಸದ ಕಲಾ ಉತ್ಸವದಲ್ಲಿ ವಿವಿಧ ಜಿಲ್ಲೆಯಲ್ಲಿ ಸಾಧನೆಗೈದ ಸಾಧಕರಿಗೆ ಕರ್ನಾಟಕ ಸೇವಾ ರತ್ನ ಪ್ರಶಸ್ತಿ 2023ರ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಈ ವೇಳೆ ಮೈಸೂರಿನ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರು ಹಾಗೂ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಸಂಘಟನಾ ಕಾರ್ಯದರ್ಶಿ ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್ ರವರಿಗೆ ಕರ್ನಾಟಕ ಸೇವಾರತ್ನ ಪ್ರಶಸ್ತಿಯನ್ನು ಭಾರತದ ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶರಾದ ಡಾ.ಸಂತೋಷ್ ಹೆಗಡೆ ಅವರು ಪ್ರಶಸ್ತಿ ನೀಡಿ ಗೌರವಿಸಿಸಿದರು.
ಇದೇ ಸಂದರ್ಭದಲ್ಲಿ ಬಂಡ್ಡೆಪಾಳ್ಯ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ರಾಜೇಶ್, ಬಿಬಿಎಂಪಿ ಮುಖ್ಯ ಆಯುಕ್ತರ ಸಂಪರ್ಕ ಅಧಿಕಾರಿ ಎಸ್ ಎನ್ ಶಂಕರ್, ಖ್ಯಾತ ಹಿರಿಯ ಕನ್ನಡ ಚಲನಚಿತ್ರ ನಟಿ ಪದ್ಮ ವಸಂತಿ, ಖ್ಯಾತ ವೈದ್ಯರು ಹಾಗೂ ಪದ್ಮಶ್ರೀ ಪುರಸ್ಕೃತರಾದ ಡಾ.ಕಾಮಿನಿ ರಾವ್ ಇನ್ನಿತರರು ಇದ್ದರು.