News Karnataka Kannada
Monday, April 29 2024
ಮೈಸೂರು

ಮೈಸೂರು: ಮತದಾನ ಪ್ರಜಾಪ್ರಭುತ್ವದ ಶ್ರೇಷ್ಠ ಹಬ್ಬ-ಕೆ ಎಸ್ ಮುಕುಂದ

Mysuru: Voting is the greatest festival of democracy: K.S. Mukunda
Photo Credit : By Author

 

ಮೈಸೂರು: ಧಾರ್ಮಿಕ ಹಬ್ಬಗಳಿಗಿಂತ ಶ್ರೇಷ್ಠವಾದದ್ದು ಪ್ರಜಾಪ್ರಭುತ್ವದ ಹಬ್ಬವಾದ ಮತದಾನದಲ್ಲಿ ಪ್ರಜ್ಞಾವಂತ ನಾಗರಿಕರೆಲ್ಲರೂ ಯಾವುದೇ ಆಸೆ ಅಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತವನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಖ್ಯಾತ ವಾಗ್ಮಿ ಕೆಎಸ್ ಮುಕುಂದ ಹೇಳಿದರು.

ನಗರದ ಸರಸ್ವತಿಪುರಂನಲ್ಲಿರುವ ಶ್ರೀಕೃಷ್ಣಧಾಮದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ವತಿಯಿಂದ ಆಯೋಜಿಸಿದ್ದ ವಿಪ್ರದ ಕಡ್ಡಾಯ ಮತದಾನದ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು ಸಮಾಜದಲ್ಲಿ ಸರ್ವರೂ ಸಮಾನತೆಯಿಂದ ಲಿಂಗಭೇಧವಿಲ್ಲದೆ ಬಾಳಲು ಸಾಧ್ಯವಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ಇಂತಹ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ನಾವು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಅರ್ಹ ವ್ಯಕ್ತಿಗಳಿಗೆ ಮತದಾನ ಚಲಾಯಿಸುವ ಮೂಲಕ ನಮ್ಮ ನೈತಿಕ ಜವಬ್ದಾರಿಯನ್ನು ಪೂರೈಸಬೇಕು ಎಂದರು,

ಇದೇ ಸಂದರ್ಭದಲ್ಲಿ ಮೈಸೂರು ಗ್ರಾಮಾಂತರ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಗೋಪಾಲ್ ರಾವ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷ ನ0 ಶ್ರೀಕಂಠ ಕುಮಾರ್, ಕರ್ನಾಟಕ ಸರ್ಕಾರದ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ರಾಜ್ಯ ನಿರ್ದೇಶಕರಾದ ಎಂ ಆರ್ ಬಾಲಕೃಷ್ಣ, ಜಿಎಸ್ಎಸ್ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಹರಿ ದ್ವಾರಕನಾಥ್, ವಿಪ್ರ ಇಪ್ರೊಫೆಷನಲ್ ಫೋರಂನ ಅಧ್ಯಕ್ಷರಾದ ಶ್ರೀನಿವಾಸ್ ಭಾಷ್ಯಂ, ತುಳು ಶಿವಳ್ಳಿ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ರವಿಶಾಸ್ತ್ರಿ, ಮೋಹನ್ ಭಟ್ , ವಿಪ್ರ ಮಹಿಳಾಸಂಗಮದ ಅಧ್ಯಕ್ಷರಾದ ಡಾ.ಲಕ್ಷ್ಮಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಮುಳ್ಳೂರು ಗುರುಪ್ರಸಾದ್, ವಸಂತ್ ಕುಮಾರ್, ವಿಪ್ರ ಜಾಗೃತಿ ವೇದಿಕೆ ಅಧ್ಯಕ್ಷರಾದ ಮುಳ್ಳೂರು ಸುರೇಶ್ ಇನ್ನಿತರರು ಸಭೆಯಲ್ಲಿ ಭಾಗಿಯಾಗಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು