ಮೈಸೂರು

ಗಣೇಶ ನಾಮ ಪಠಿಸಿ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸಾಧನೆ ಮಾಡಿದ ಮೈಸೂರಿನ ಪ್ರಣವ್

ಮೈಸೂರು: ಮೈಸೂರಿನ ಕ್ಯಾಪಿಟಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಏಳನೇ ತರಗತಿ ಓದುತ್ತಿರುವ 12 ವರ್ಷದ ಪ್ರಣವ್ ಎಸ್. ಗಣೇಶನ ನಾಮಗಳನ್ನು ಪಠಿಸುತ್ತಾ 3×3 ರೂಬಿಕ್ಸ್ ಕ್ಯೂಬ್ ಅನ್ನು ಕಡಿಮೆ ಸಮಯದಲ್ಲಿ ಪರಿಹರಿಸುವ ಮೂಲಕ ಅಂತಾರಾಷ್ಟ್ರೀಯ ದಾಖಲೆ ಬರೆದಿದ್ದಾರೆ.

ಪ್ರಣವ್ ಅವರು ಗಣೇಶ ದೇವರ 65 ಬಗೆಯ ಹೆಸರನ್ನು ವರ್ಣಮಾಲೆಯ ಕ್ರಮದಲ್ಲಿ ಹೇಳುತ್ತಾ 3×3 ರೂಬಿಕ್ ಕ್ಯೂಬ್ ಅನ್ನು ವೇಗವಾಗಿ ಪರಿಹರಿಸಿ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ನಿರ್ಮಿಸಿ ಮೈಸೂರಿಗೆ ಕೀರ್ತಿ ತಂದಿದ್ದಾರೆ.

ಪ್ರಣವ್ ಕೇವಲ 1 ನಿಮಿಷ 6 ಸೆಕೆಂಡುಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಪ್ರಣವ್, ಕಳೆದ ಬೇಸಿಗೆಯಲ್ಲಿ ರೂಬಿಕ್ಸ್ ಕ್ಯೂಬ್ ಅಭ್ಯಾಸ ಮಾಡುವಾಗ ಗಣೇಶನ ಹೆಸರನ್ನು ಹೇಳಲು ಪ್ರಾರಂಭಿಸಿದರು. ಇದೀಗ ಅವರ ಸಾಧನೆ ಅಂತಾರಾಷ್ಟ್ರೀಯ ಗೌರವ ತಂದುಕೊಟ್ಟಿದೆ. ಅಂದಹಾಗೆ ಪ್ರಣವ್ ತಂದೆ ಕೆ.ಟಿ.ಸ್ವಾಮಿ ವಕೀಲರಾಗಿದ್ದು, ತಾಯಿ ಸೌಮ್ಯ ಚನ್ನಯ್ಯ ಜೆಎಸ್‌ಎಸ್ ಮಹಾವಿದ್ಯಾಪೀಠದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

“ಮೊದಲಿಗೆ ರೂಬಿಕ್ಸ್ ಕ್ಯೂಬ್ ಮಾಡುವಾಗ ಗಣೇಶನ ಹೆಸರನ್ನು ಹೇಳಲು ಪ್ರಾರಂಭಿಸಿದೆ. ಇದರಿಂದ ಗಣೇಶನ ಹೆಸರುಗಳು ಪರಿಚಯವಾಯಿತು. ಇದೆ ಇಂಟರ್‌ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸಾಧನೆ ಮಾಡಲು ಪ್ರೇರಣೆ ನೀಡಿತು. ಮುಂದಿನ ಬೇಸಿಗೆಯ ವೇಳೆಗೆ ನಾನು ಕೇವಲ 30 ಸೆಕೆಂಡುಗಳಲ್ಲಿ ಗಣಪತಿ ನಾಮಗಳನ್ನು ಪಠಿಸುವ ಮೂಲಕ ಗಿನ್ನೆಸ್ ರೆಕಾರ್ಡ್ ಮಾಡಬೇಕೆಂದುಕೊಂಡಿದ್ದೇನೆ” ಎಂದು ಪ್ರಣವ್ ಸಂತಸ ವ್ಯಕ್ತಡಿಸಿದ್ದಾರೆ.

ಸ್ವತಃ ಪೈಥಾನ್ ಕಲಿಯುತ್ತಿರುವ ಪ್ರಣವ್ ಕಂಪ್ಯೂಟರ್ ಪ್ರೋಗ್ರಾಮಿಂಗ್, ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆಯಲ್ಲಿ ಆಸಕ್ತಿ ಹೊಂದಿದ್ದಾರೆ. ರೂಬಿಕ್ಸ್ ಕ್ಯೂಬ್‌ನಲ್ಲಿ ಮಾತ್ರವಲ್ಲದೆ ವಿವಿಧ ಸ್ಪರ್ಧೆಗಳಲ್ಲಿ ಪದಕಗಳನ್ನು ಗೆದ್ದಿರುವ ಅತ್ಯುತ್ತಮ ಕರಾಟೆಪಟುವೂ ಆಗಿದ್ದಾರೆ.

Ashika S

Recent Posts

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

12 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

24 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

41 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

52 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

2 hours ago