ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದಲ್ಲಿ ರಂಜಾನ್ ಹಬ್ಬದ ವೇಳೆ ಕವಲಂದೆ ಬೋಲೇ ತೋ ಚೋಟಾ ಪಾಕಿಸ್ತಾನ್ ಠೀಕ್ ಹೈ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದ್ದ ಇಬ್ಬರು ಕಿಡಿಗೇಡಿಗಳನ್ನು ದೊಡ್ಡಕವಲಂದೆ ಠಾಣೆಯ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಘಟನೆಯಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣವುಂಟಾಗಿದ್ದು, ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ದೊಡ್ಡಕವಲಂದೆ ಗ್ರಾಮದ ಸೈಯದ್ ಷರೀಫ್, ಹಾಗೂ ಹನಾನ್ ಖಾನ್ ಬಂಧಿತರು. ರಂಜಾನ್ ಹಬ್ಬದ ದಿನದಂದು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದ ಮುಸ್ಲಿಮರು ನಂತರ ಮನೆಗೆ ತೆರಳುವ ಸಂದರ್ಭದಲ್ಲಿ ಕಿಡಿಗೇಡಿಗಳಿಬ್ಬರು ವಿಡಿಯೋ ರೆಕಾರ್ಡ್ ಮಾಡುತ್ತಾ ಕವಲಂದೆ ಬೋಲೇ ತೋ ಚೋಟಾ ಪಾಕಿಸ್ತಾನ್ ಠೀಕ್ ಹೈ ಎಂದು ಘೋಷಣೆ ಕೂಗಿದ್ದರು.
ಈ ವಿಡಿಯೋ ವೈರಲ್ ಆಗಿತ್ತು. ಕಿಡಿಗೇಡಿಗಳನ್ನ ಬಂಧಿಸುವಂತೆ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಪ್ರತಿಭಟನೆ ನಡೆಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಆರ್.ಚೇತನ್ ಮತ್ತು ತಂಡ ಕಿಡಿಗೇಡಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣ ದಾಖಲು:
ಪ್ರಕರಣದಕ್ಕೆ ಸಂಬAಧಿಸಿದ್ದAತೆ ಆರೋಪಿಗಳ ವಿರುದ್ಧ ಐಪಿಸಿ ಸಕ್ಷನ್ 153-ಂ, 153-ಃ, 505-2 ಹಾಗೂ 34 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ಪಿ ಚೇತನ್, ಸಮಾಜದಲ್ಲಿ ಶಾಂತಿ ಭಂಗ ಮಾಡಿ, ಅಶಾಂತಿ ವಾತಾವರಣ ಸೃಷ್ಟಿಸುವುದು, ಕೋಮುಗಳ ವಿಚಾರವಾಗಿ ತಪ್ಪು ಮಾಹಿತಿ ನೀಡುವುದು , ದೇಶದ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡುವುದು, ಈ ರೀತಿಯ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವುದು, ಹೀಗೆ ದುಷ್ಕೃತ್ಯ ಎಸಗುವವರ ವಿರುದ್ಧ ಖಂಡಿತವಾಗಿಯೂ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈ ಕೃತ್ಯ ಎಸಗಿದವರು ಯಾರು? ಅವರಿಗೆ ಪ್ರೇರಣೆ ಏನು? ಹೀಗೆ ಎಲ್ಲದರ ಬಗ್ಗೆಯೂ ತನಿಖೆ ಮಾಡಿ ಸಮರ್ಪಕ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಆರಂಭಿಸಿದ್ದು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣುವ ವ್ಯಕ್ತಿಗಳ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಆ ಸಂದರ್ಭದಲ್ಲಿ ಚಿತ್ರೀಕರಿಸಿರುವ ಬೇರೆ ಬೇರೆ ವಿಡಿಯೋಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ತನಿಖೆಯಿಂದ ಕೃತ್ಯ ಎಸಗಿರುವವರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.