News Karnataka Kannada
Sunday, April 28 2024
ಮೈಸೂರು

ಅಂಬೇಡ್ಕರ್ ಗೆ ಅಗೌರವ: ಬಿಜೆಪಿ ಶಾಸಕನಿಂದ ಸಿಎಂಗೆ ಮನವಿ

Mysore
Photo Credit : By Author

ಮೈಸೂರು: ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸುವ ಹಾಗೂ ಅಗೌರವ ತೋರುವ ಯಾವುದೇ ಘಟನೆಗಳು  ಮರುಕಳಿಸದಂತೆ ಕ್ರಮಕೈಗೊಳ್ಳುವಂತೆ ನಂಜನಗೂಡು ಶಾಸಕ ಬಿ. ಹರ್ಷವರ್ಧನ್ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಮುಖ್ಯಮಂತ್ರಿಯವರು ಮೈಸೂರಿಗೆ ಬಂದಿದ್ದ ಸಂದರ್ಭದಲ್ಲಿ ಶಾಸಕರು  ಮೈಸೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಪತ್ರವನ್ನೂ ಸಲ್ಲಿಸಿದ್ದು, ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಸಂದರ್ಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಉಲ್ಲೇಖಿಸದಿರುವುದು ಸರಿಯಲ್ಲ. ಬಸವಣ್ಣ ಮತ್ತು ಕುವೆಂಪು ಅವರ ಕುರಿತಾದ ಪಾಠಗಳು ಸತ್ಯಕ್ಕೆ ಹತ್ತಿರವಾಗಿರಲಿಲ್ಲ ಎಂಬುದು ಹಲವರ ಅಭಿಪ್ರಾಯ.

ಭವಿಷ್ಯದಲ್ಲಿ ಇಂತಹ ಲೋಪಗಳು ಮರುಕಳಿಸಬಾರದು, ಇದರಿಂದ ಜನರ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು