ಮೈಸೂರು: ಸಂಪುಟ ಪುನರ್ ರಚನೆ, ಸಂಪುಟ ವಿಸ್ತರಣೆ ವಿಚಾರ ನನಗೆ ಗೊತ್ತಿಲ್ಲ. ಮೈಸೂರು ಜಿಲ್ಲಾ ಉಸ್ತುವಾರಿಯಾಗಿ ಇರಬೇಕು ಎಂಬ ಹಠ ನನಗಿಲ್ಲ ಎಂದು ಬಯಸಿಲ್ಲ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಮತ್ತು ಪುನರ್ ರಚನೆ ಬಗ್ಗೆ ಸಿಎಂ ಅವರೇ ಎಲ್ಲವನ್ನೂ ತಿಳಿಸಬೇಕು ಎಂದರು.
ಮೈಸೂರು ಜಿಲ್ಲಾ ಉಸ್ತುವಾರಿಗೆ ಪೈಪೋಟಿ ಹೆಚ್ಚಾಗಿದ್ದರೆ ಸಂತೋಷ. ನಾನೇ ಇಲ್ಲಿ ಸದಾ ಇರಬೇಕು ಎಂದು ಬಯಸಿಲ್ಲ. ನನಗೆ ಮಾತ್ರ ಉಸ್ತುವಾರಿ ಸ್ಥಾನ ಇರಬೇಕೆಂದು ಪಟ್ಟು ಕೂಡ ಹಿಡಿದಿಲ್ಲ. ಬೇರೆಯವರಿಗೆ ಈ ಸ್ಥಾನ ಕೊಟ್ಟರು ಸಂತೋಷ. ಯಡಿಯೂರಪ್ಪ ಅವರು ಈ ಸ್ಥಾನ ಕೊಟ್ಟಿದ್ದರು. ಬೊಮ್ಮಾಯಿ ಅವರು ಕೂಡ ಈ ಮುಂದುವರಿಸಿzರೆ. ಕೊಟ್ಟ ಜವಾಬ್ದಾರಿ ನಿರ್ವಹಿಸಿದ್ದೇನೆ. ಬದಲಾವಣೆ ಏನಿದ್ದರೂ ಅದು ಸಿಎಂ ತೀರ್ಮಾನ ಎಂದು ಹೇಳಿದರು.
ಸಾಮಾನ್ಯವಾಗಿ ಹೊಸದಾಗಿ ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಪರ, ವಿರೋಧ ಇರುತ್ತದೆ. ಚಾಮುಂಡಿಬೆಟ್ಟಕ್ಕೆ ರೋಪ್ ವೇ ವಿಚಾರವಾಗಿ ಪ್ರಮೋದಾದೇವಿ ಹಾಗೂ ಇತರರ ಹೇಳಿಕೆಗಳನ್ನು ಗಮನಿಸಿದ್ದೇವೆ. ಎಲ್ಲವನ್ನೂ ಮುಖ್ಯಮಂತ್ರಿ ಗಮನಕ್ಕೆ ತಂದು ಚರ್ಚಿಸಲಾಗುವುದು ಎಂದರು.
ದೇವರಾಜ ಮಾರುಕಟ್ಟೆ ಮರು ನಿರ್ಮಾಣ ವಿಚಾರ ಶಾಸಕ ನಾಗೇಂದ್ರ ಅವರು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದಾರೆ. ಸಚಿವ ಸಂಪುಟದ ಬಗ್ಗೆ ಮುಖ್ಯಮಂತ್ರಿ ಉತ್ತರಿಸಲಿzರೆ. ಪಾಲಿಕೆ ಬಜೆಟ್ ಕುರಿತು ಪರಾಮರ್ಶಿಸಲಾಗುವುದು. ಮೇಯರ್, ಆಯುಕ್ತರ ಜೊತೆ ಮಾತುಕತೆ ನಡೆಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ…
ಭೋಪಾಲ್ನ ಪ್ರತಿ ಬೂತ್ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…
ಯುನೈಟೆಡ್ ಸ್ಟೇಟ್ಸ್ನಲ್ಲಿ ಪತ್ತೆಯಾದ ಈ ಭಿನ್ನ ಗುಂಪನ್ನು ತೀವ್ರ ತೀವ್ರ ಉಸಿರಾಟದ ಸಿಂಡ್ರೋಮ್ ಕೊರೊನಾ ವೈರಸ್ 2 (SARS-CoV-2) ಫ್ಲರ್ಟ್…
ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್ನಲ್ಲಿ ನಡೆದಿದೆ.…
ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ…