Categories: ಮೈಸೂರು

ಎನ್‌ಟಿಎಂಎಸ್ ಶಾಲಾ ಸ್ಥಳಾಂತರಕ್ಕೆ ವಿರೋಧಿಸಿ ಪ್ರತಿಭಟಿಸಿದವರ ಬಂಧನ

ಮೈಸೂರು: ನಗರದ ನಾರಾಯಣ ಶಾಸ್ತಿç ರಸ್ತೆಯಲ್ಲಿರುವ ಎನ್ ಟಿಎಂ ಎಸ್ ಶಾಲೆ ಸ್ಥಳಾಂತರ ಮಾಡಿದ್ದನ್ನು ವಿರೋಧಿಸಿ ಎನ್ ಟಿಎಂಎಸ್ ಶಾಲೆ ಉಳಿಸಿ ಹೋರಾಟ ಸಮಿತಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಮಾಜಿ ಶಾಸಕ ಎಂ ಕೆ ಸೋಮಶೇಖರ್ ನೇತೃತ್ವದಲ್ಲಿ ಶಾಲೆ ಮುಂಭಾಗದ ರಸ್ತೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಪ್ರಥಮ ಕನ್ನಡ ಶಾಲೆ ಉಳಿಯಲಿ ಎಂದು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ ಎಂ. ಕೆ ಸೋಮಶೇಖರ್ ಸೇರಿದಂತೆ ಜತೆ ಕೆಲ ಹೋರಾಟಗಾರರನ್ನ ಪೊಲೀಸರು ಬಂಧಿಸಿದರು . ನಂತರ ಶಾಂತಿಯುತ ಪ್ರತಿಭಟನೆಗೆ ಅನುವು ಮಾಡಿಕೊಟ್ಟರು.

ಪೋಲಿಸ್ ಬಂದೋಬಸ್ತ್ ನಲ್ಲಿ ಎನ್ ಟಿ ಎಂ ಎಸ್ ಶಾಲಾ ಮಕ್ಕಳಿಗೆ ತರಗತಿ ಆರಂಭ. ಮಹಾರಾಣಿ ಸರ್ಕಾರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಕಟ್ಟಡದಲ್ಲಿ ಪೋಲಿಸ್ ಬಂದೂಬಸ್ತ್ ನಲ್ಲಿ ಎನ್ ಟಿ ಎಂ ಎಸ್ ಶಾಲಾ ಮಕ್ಕಳಿಗೆ ತರಗತಿ ಆರಂಭವಾಗಿದ್ದು, ಮಕ್ಕಳಿಗೆ ಡಿಡಿಪಿಐ ರಾಮಚಂದ್ರರಾಜೆ ಅರಸ್ ಸಿಹಿ ವಿತರಿಸಿದರು.

ಈ ವೇಳೆ ಮಾತನಾಡಿದ ಅವರು, ಸರ್ಕಾರ ಆದೇಶದಂತೆ ಶಾಲೆ ಸ್ಥಳಾಂತರ ಮಾಡಿದ್ದೇವೆ. ಇದು ಎನ್ ಟಿಎಂ ಎಸ್ ಶಾಲೆಯ ಮೂಲ ಕಟ್ಟಡ. ಮೊದಲು ಶಾಲೆ ಆರಂಭವಾಗಿದ್ದೆ ಹಾಗಾಗಿಯೇ ಮತ್ತೆ ಇಲ್ಲಿಯೇ ಈಗ ಮತ್ತೆ ಮೂಲ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದೇವೆ. ಸರ್ಕಾರಿ ಮಹಾರಾಣಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹೆಸರಿನಲ್ಲಿ ನಡೆಯುತ್ತಿದೆ.

ಎಲ್ಲಾ ಸುಸಜ್ಜಿತ ವ್ಯವಸ್ಥೆ ಮಾಡಿಕೊಡಲಾಗುವುದು. ಶಿಕ್ಷಣ ಸಚಿವರು ಕೂಡ ಶಾಲೆ ಅಭಿವೃದ್ಧಿ ಕುರಿತು ಯೋಜನೆ ರೂಪಿಸಿ ಸರ್ಕಾರಕ್ಕೆ ಕಳಹಿಸಿಕೊಡುವಂತೆ ಸೂಚಿಸಿದ್ದಾರೆ. ಎನ್ ಟಿ ಎಂ ಶಾಲೆ ಮುಚ್ಚಿಲ್ಲ. ಮುಂದುವರೆದಿದೆ ಎಂದು ಹೇಳಿದರು.

Sneha Gowda

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

2 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

4 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago