News Karnataka Kannada
Friday, May 03 2024
ಮೈಸೂರು

ಕಡವೆ, ಜಿಂಕೆ ಬೇಟೆಯಾಡಿದ್ದ ಐವರು ಬೇಟೆಗಾರರ ಬಂಧನ

Jinke
Photo Credit :

ಮೈಸೂರು: ನಾಗರಹೊಳೆ ಅರಣ್ಯದಲ್ಲಿ ಜಿಂಕೆ ಮತ್ತು ಕಡವೆಯನ್ನು ಬೇಟೆಯಾಡಿದ್ದ ಐವರು ಬೇಟೆಗಾರರನ್ನು ಬಂಧಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ತಲೆ ಮರೆಸಿಕೊಂಡಿರುವ ಏಳು ಮಂದಿಗಾಗಿ ಶೋಧನೆ ಆರಂಭಿಸಿದ್ದಾರೆ.

ಪಿರಿಯಾಪಟ್ಟಣ ತಾಲೂಕು ದೊಡ್ಡಹರವೆ ಗ್ರಾಮದ ರವಿ, ನಾರಾಯಣ, ನವಿಲೂರು ಗ್ರಾಮದ ಸ್ವಾಮಿ, ಸುದೀಪ್ ಮತ್ತು ಪ್ರೇಮಕುಮಾರ್ ಬಂಧಿತರಾಗಿದ್ದು, ಇವರಿಂದ ಬೇಟೆಯಾಡಿದ ಕಡವೆ ಮತ್ತು ಮೂಸಿಕ ಜಿಂಕೆಯ ಮಾಂಸ, ಐದು ದ್ವಿಚಕ್ರವಾಹನ, ಎರಡು ಒಂಟಿ ನಳಿಕೆಯ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.

ಇದೀಗ ಸೆರೆ ಸಿಕ್ಕಿರುವ ಐವರು ಆರೋಪಿಗಳು ಸೇರಿದಂತೆ ಹನ್ನೆರಡು ಮಂದಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯ ಜೀವಿ ವಲಯದ ದೊಡ್ಡಹರವೆ ಮೀಸಲು ಅರಣ್ಯದಲ್ಲಿ ಕಡವೆ ಮತ್ತು ಹೆಣ್ಣು ಮೂಸಿಕ ಜಿಂಕೆಯನ್ನು ಬೇಟೆಯಾಡಿದ್ದು, ಬಳಿಕ ಶುಂಠಿ ಜಮೀನಿನಲ್ಲಿರುವ ಶೆಡ್ ನಲ್ಲಿ ಮಾಂಸ ಮಾಡಿ ಸಂಗ್ರಹಿಸಿಟ್ಟಿದ್ದರು. ಈ ಬಗ್ಗೆ ಖಚಿತ ಮಾಹಿತಿ ಅರಣ್ಯ ಇಲಾಖೆಗೆ ಬಂದಿತ್ತು. ಹೀಗಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಹನುಮಂತ ರಾಜು ಅವರ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ, ಗಣರಾಜ್ ಪಟಗಾರ್, ಉಪ ವಲಯ ಅರಣ್ಯಾಧಿಕಾರಿಗಳಾದ ರಾಮು, ಪ್ರಸನ್ನಕುಮಾರ್, ಅರಣ್ಯರಕ್ಷಕ ಮಹೇಶ್ ಸೇರಿದಂತೆ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಈ ವೇಳೆ ಐವರು ಆರೋಪಿಗಳು ಸೆರೆ ಸಿಕ್ಕಿದ್ದು ಉಳಿದ ಏಳು ಮಂದಿ ತಲೆ ಮರೆಸಿಕೊಂಡಿದ್ದಾರೆ. ಆರೋಪಿಗಳಿಂದ ಮಾಂಸ ಸೇರಿದಂತೆ ಬಂದೂಕು, ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಮೇರೆಗೆ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು