News Karnataka Kannada
Monday, May 06 2024
ಮೈಸೂರು

ಕರಾಮುವಿ ಪದವಿ ಅಂಗೀಕರಿಸುವಂತೆ ಪತ್ರ

Mysore
Photo Credit :

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪದವಿ ಪಡೆದವರಿಗೆ ಉದ್ಯೋಗಕ್ಕೆ ಅರ್ಜಿ ಹಾಕಿದರೆ ಮಾನ್ಯ ಮಾಡುವುದಿಲ್ಲ ಎಂದು ಮೈಸೂರು ಮತ್ತು ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಅಧಿಸೂಚನೆ ಹೊರಡಿಸಿದ್ದು, ಈ ಸಂಬಂಧ ಅಧಿಸೂಚನೆ ವಾಪಸ್ ಪಡೆಯುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಸಹಕಾರ ಸಚಿವರಿಗೆ ಪತ್ರ ಬರೆದಿದ್ದಾರೆ.

ಹಾಲು ಒಕ್ಕೂಟದ ಅಧಿಸೂಚನೆಗೆ ಮುಕ್ತ ವಿವಿ ಅಸಮಾಧಾನ ವ್ಯಕ್ತಪಡಿಸಿ, ಈ ಸಮಸ್ಯೆ ಸರಿಪಡಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಕೋರಿತ್ತು. ಹೀಗಾಗಿ ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ ಮುಕ್ತ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮ್ಮೇಳನದಲ್ಲಿ ಉನ್ನತ ಶಿಕ್ಷಣ ಸಚಿವರ ಗಮನಕ್ಕೆ ಮುಕ್ತ ವಿವಿ ಕುಲಪತಿ ಡಾ.ಎಸ್.ವಿದ್ಯಾಶಂಕರ್ ಈ ವಿಷಯವನ್ನು ತಂದಿದ್ದರು.

ಈ ಹಿನ್ನೆಲೆಯಲ್ಲಿ ಮೈಸೂರು ಮತ್ತು ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಅಧಿಸೂಚನೆ ವಾಪಸ್ ಪಡೆಯುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಸಹಕಾರ ಸಚಿವರಿಗೆ ಪತ್ರ ಬರೆದಿದ್ದಾರೆ. ಸಹಕಾರ ಸಚಿವರು, ಸರ್ಕಾರದ ಕಾರ್ಯದರ್ಶಿ, ಸಹಕಾರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಕರ್ನಾಟಕ ಹಾಲು ಮಾರಾಟ ಮಹಾಮಂಡಳದ ಅಧ್ಯಕ್ಷರು, ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಿಗೆ ಉನ್ನತ ಶಿಕ್ಷಣ ಸಚಿವ ಪತ್ರ ಬರೆದಿದ್ದಾರೆ.

ಮುಕ್ತ ವಿಶ್ವವಿದ್ಯಾಲಯ ಉನ್ನತ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ವಿಶ್ವವಿದ್ಯಾಲಯವಾಗಿದ್ದು, ಈ ವಿವಿಯಲ್ಲಿ ಪಡೆಯುವ ಎಲ್ಲ ಪದವಿ, ಸ್ನಾತಕೋತ್ತರ ಪದವಿಗಳು ಸರ್ಕಾರದಿಂದ ಮಾನ್ಯತೆ ಪಡೆದಿದೆ. ಇನ್ನಿತರ ವಿವಿಗಳಂತೆಯೆ ಸಮಾನವಾಗಿರುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಅಧಿಸೂಚನೆಯಿಂದ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಉದ್ಯೋಗ ವಂಚಿತರಾಗಲಿದ್ದಾರೆ. ಆದ್ದರಿಂದ ಸದರಿ ಅಧಿಸೂಚನೆಯನ್ನು ತಿದ್ದುಪಡಿ ಮಾಡಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳಿಗೂ ಸಹ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈಗಾಗಲೇ ಪ್ರಕಟಿಸಿರುವ ಅಧಿಸೂಚನೆ ಹಿಂಪಡೆದುಕೊಳ್ಳಬೇಕು ಎಂದು ಕೋರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು