ಮೈಸೂರು : ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಿ ಅವರಿಗೆ ಕರ್ನಾಟಕ ಮಹಿಳಾ ರತ್ನ ಪ್ರಶಸ್ತಿ ನೀಡಲು ನಗರದ ದುರ್ಗಾಫೌಂಡೇಶನ್ ಮುಂದಾಗಿದೆ.
ಈ ಸಂಬಂಧ ಫೌಂಡೇಶನ್ ವತಿಯಿಂದ ಕರ್ನಾಟಕ ಮಹಿಳಾ ರತ್ನ ಅವಾರ್ಡ್ ನ ಲೋಗೋ ಹಾಗೂ ವೆಬ್ ಸೈಟ್ ನ ಬಿಡುಗಡೆಗೊಳಿಸಲಾಗಿದೆ. ಮಾರ್ಚ್ ನಲ್ಲಿ ನಡೆಯುತ್ತಿರುವ ಮಹಿಳಾ ದಿನಾಚರಣೆ ಅಂಗವಾಗಿ ಪೂರ್ವಭಾವಿಯಾಗಿ ರಾಜ್ಯಮಟ್ಟದ ಗ್ರಾಮಾಂತರ ಹಾಗೂ ಪ್ರತಿಯೊಂದು ಜಿಲ್ಲೆಯ ಪ್ರತಿಭಾವಂತ ಮಹಿಳೆಯರನ್ನು ಗುರುತಿಸಿ ಅಂಥವರಿಗೆ ಕರ್ನಾಟಕ ಮಹಿಳಾ ರತ್ನ ಪ್ರಶಸ್ತಿಯನ್ನು ನೀಡುವ ನಿಟ್ಟಿನಲ್ಲಿ ಅದರ ಮಾಹಿತಿಯನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕಾರ್ಯಕ್ಕೆ ಕ್ರಮ ಕೈಗೊಳ್ಳಲಾಗಿದೆ.
ಮುಡಾ ಸದಸ್ಯರಾದ ಲಕ್ಷ್ಮೀದೇವಿ ಮಾತನಾಡಿ ಬಸವಣ್ಣನವರು ಹನ್ನೆರಡನೇ ಶತಮಾನದಲ್ಲೇ ಮಹಿಳೆಯರಿಗೆ ಮೊದಲ ಪ್ರಾಮುಖ್ಯತೆ ಕೊಡಬೇಕೆಂದು ಹೋರಾಟ ನಡೆಸಿದರು. ಅಂದು ಅನುಭವ ಮಂಟಪದಲ್ಲಿ ಅಕ್ಕಮಹಾದೇವಿ ಅವರಿಗೆ ಮೊದಲು ಪ್ರಾಮುಖ್ಯತೆ ಕೊಟ್ಟಿದ್ದು ಇದೇ ಬಸವಣ್ಣನವರು. ಕಿತ್ತೂರು ರಾಣಿ ಚನ್ನಮ್ಮ, ಒಣಕೆ ಓಬವ್ವ ಹೀಗೆ ಮಹಿಳಾಮಣಿಗಳು ನಮ್ಮ ದೇಶದಲ್ಲಿ ಅವರದ್ದೇ ಆದ ಕೊಡುಗೆಯನ್ನು ನೀಡಿದ್ದಾರೆ. ಹೀಗಾಗಿ ಸಾಧಕ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ಪ್ರಶಸ್ತಿಗಳನ್ನು ನೀಡುತ್ತಿರುವುದಾಗಿ ಹೇಳಿದರು.
ಈ ವೇಳೆ ಚಲನಚಿತ್ರ ನಟ ಚೇತನ್ ರವರ ಧರ್ಮಪತ್ನಿ ಕಿರುತೆರೆ ನಟಿ ಮೇಘ, ಬಿಜೆಪಿ ಮುಖಂಡರಾದ ಯಶಸ್ವಿನಿ ಸೋಮಶೇಖರ್ , ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ , ನಗರಪಾಲಿಕೆ ಸದಸ್ಯರಾದ ಪ್ರಮೀಳಾ ಭರತ್, ಜಗದೀಶ್ , ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಗಂಗಾಧರ ಗೌಡ , ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಲಕ್ಷ್ಮೀದೇವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ನಿರ್ದೇಶಕಿ ರೇಣುಕರಾಜ, ಮೃಗಾಲಯ ಪ್ರಾಧಿಕಾರದ ಸದಸ್ಯರಾದ ಜ್ಯೋತಿ ರೇಚಣ್ಣ, ಬಿಜೆಪಿ ಹಿಂದುಳಿದ ವರ್ಗದ ನಗರಾಧ್ಯಕ್ಷ ಜೋಗಿ ಮಂಜು, ರೂಪ ‘ಬಿಂದು ಗೌಡ, ಭೂಮಿಕ ಹೊರಕೇರಿ, ಕವಿತಾ ಮಠದ್, ದಶಮಿ ಬೈಕರ್, ಮೇಘ, ಶಿಲ್ಪಾ ಸುಧಾಕರ್, ಮನುಶ್ರೀ,ರೂಪ, ಸ್ಮಿತಾ ಇನ್ನಿತರರು ಹಾಜರಿದ್ದರು.
ಮಾಹಿತಿಗೆ ರೇಖಾ ಶ್ರೀನಿವಾಸ್ ಅಧ್ಯಕ್ಷರು ದುರ್ಗಾ ಫೌಂಡೇಶನ್ 91 89713 89539 ಅವರನ್ನು ಸಂಪರ್ಕಿಸಬಹುದಾಗಿದೆ.