f
ಮೈಸೂರು, : ಮೈಸೂರು ನಗರದ ಸ್ವಚ್ಛತೆಯನ್ನು ಕಾಪಾಡುವ ಸಲುವಾಗಿ ಕಸ ವಿಲೇವಾರಿ ಮಾಡುವ ಹೊಸ ಆಟೋ ಟಿಪ್ಪರ್ ವಾಹನಗಳಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಂಗಳವಾರ ಮೈಸೂರು ನಗರ ಪಾಲಿಕೆಯ ಆವರಣದಲ್ಲಿ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಅವರು ಮಾತನಾಡಿ, ಮೈಸೂರು ನಗರವನ್ನು ಸ್ಚಚ್ಛ ನಗರ ಮಾಡಲು ಪೌರ ಕಾರ್ಮಿಕರು ಮಾಡುತ್ತಿರುವ ಕೆಲಸ ಶ್ಲಾಘನೀಯವಾದುದು. ನಗರದ ಸ್ವಚ್ಚತೆಗೆ ಸರ್ಕಾರವು ಮಾಡಿರುವ ಹಲವಾರು ಕ್ರಮಗಳನ್ನು ನಗರ ಪಾಲಿಕೆಯ ಸಿಬ್ಬಂದಿಗಳು, ಸದಸ್ಯರು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಮಹಾಪೌರರಾದ ಅನ್ವರ್ ಬೇಗ್, ನಗರ ಪಾಲಿಕೆಯ ಆಯುಕ್ತ ಜಿ.ಲಕ್ಷ್ಮಿಕಾಂತ್ ರೆಡ್ಡಿ, ಆರೋಗ್ಯಾಧಿಕಾರಿ ಡಾ. ಡಿ.ಜಿ.ನಾಗರಾಜ್, ಅಧೀಕ್ಷಕ ಇಂಜಿನಿಯರ್ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.
ಕಸವಿಲೇವಾರಿ ಮಾಡುವ ವಾಹನಗಳಿಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.