News Karnataka Kannada
Tuesday, May 07 2024
ಮೈಸೂರು

ಕಾರು-ಓಮಿನಿ ವ್ಯಾನ್ ಮುಖಾಮುಖಿ, 10 ಮಂದಿಗೆ ಗಾಯ

Accident
Photo Credit :

ಹನೂರು: ಕಾರು ಹಾಗೂ ಓಮಿನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ 10ಕ್ಕೂ ಜನರು ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಮಂಗಲ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೈಸೂರು ತಾಲ್ಲೂಕಿನ ಹೆಚ್.ಡಿ ಕೋಟೆ ತಾಲೂಕಿನ ಹಂಪಾಪುರ ಗ್ರಾಮದ ರವಿ (30), ರವಿ (35). ರೇವಣ್ಣ (42), ಮಹದೇವ (52), ಶಿವಪ್ಪ (60), ರಾಚೇಗೌಡ (55), ಕೆಂಡಗಣ್ಣೇಗೌಡ (70), ನಾಗರಾಜು (75) ಹಾಗೂ ಬಸವೇಗೌಡ (76) ಹಾಗೂ ಮಹೇಶ್ (45) ಎಂಬವರು ಗಾಯಗೊಂಡವರು.

ಹೆಚ್.ಡಿ ಕೋಟೆ ತಾಲೂಕಿನ ಹಂಪಾಪುರ ಗ್ರಾಮದ 12 ವರ್ಷದ ಹುಡುಗ (ಯಶವಂತ್) ಸೇರಿದಂತೆ 11 ಮಂದಿ ಓಮಿನಿಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಹನೂರಿನಿಂದ ಕೊಳ್ಳೇಗಾಲ ಮಾರ್ಗವಾಗಿ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಓಮಿನಿ ಕಾರು ಪಲ್ಟಿಯಾಗಿ ಹತ್ತು ಮಂದಿ ಗಾಯಗೊಂಡಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸಾರ್ವಜನಿಕರು ಹನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕಾಮಿಸಿದ ಪೋಲಿಸರು ಗಾಯಾಳುಗಳನ್ನು ಆಸ್ಪತೆಗೆ 108 ವಾಹನದ ಮೂಲಕ ಚಿಕಿತ್ಸೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು