ಮೈಸೂರು: ನಗರದ ಪಡುವಾರಹಳ್ಳಿ ಮಡಿಕೇರಿ ಮಾರ್ಗವಾಗಿ ಕರ್ನಾಟಕ ರಾಜ್ಯ ಮುಕ್ತ ವಿವಿ ಮುಂಭಾಗ ವೃತ್ತಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ. ಆದರೆ ಅಲ್ಲಿ ಹಾಕಲಾಗಿದ್ದ ನಾಮ ಫಲಕವನ್ನೇ ನಾಪತ್ತೆ ಮಾಡಲಾಗಿದೆ.
ಅಲ್ಲದೇ ಇದೇ ಸ್ಥಳದಲ್ಲಿರುವ ಶಾಲೆಯವರು ತಮ್ಮ ಕಟ್ಟಡದ ಒಳಗಿರುವ ಫಲಕದಲ್ಲಿ ಸೆಂಟ್ ಜೋಸೆಫ್ ಕಾರ್ನರ್ ಎಂದು ಬರೆಸಿ ಗೊಂದಲ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಮಂಗಳವಾರ ಕೂಡಲೇ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ನಾಮಫಲಕ ಅಳವಡಿಸಲು ಆಗ್ರಹಿಸಿ ಸ್ಥಳದಲ್ಲಿ ಜನಾಂದೋಲನ ನಡೆಸಲಾಯಿತು.
ದಿ ಮೈಸೂರು ಕೊ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಪಡುವಾರಹಳ್ಳಿ ಎಂ. ರಾಮಕೃಷ್ಣ , ನಗರಪಾಲಿಕೆ ಸದಸ್ಯ ಎಂ.ಚಿಕ್ಕವೆಕಟು,ಟೆನ್ನಿಸ್ ಗೋಪಿ,ಜೀವನ್ ಪ್ರಕಾಶ್, ಒಕ್ಕಲಿಗರ ಸಂಘದ ನಿರ್ದೇಶಕ ಎ.ರವಿ, ದಿ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಎಸ್ ಬಿ ಶಿವು, ಜನಹಿತವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಸಿ ಡಿ.ಕುಮಾರ್,ಬಿ.ಕುಮಾರ್, ರಾಘವ್ ಎಂ.ಗೌಡ, ಬಿ.ಸಂತೋಷ್,ಕುoಬಾರಕೊಪ್ಪಲು ನಾಗೇಶ್, ಎಂ.ಶಿವಪ್ರಕಾಶ್ , ಬಿ.ಕುಮಾರ್ ಗೌಡ, ವೇಣು, ಗೋಪಾಲ, ಗಿರೀಶ್, ಶಿವರಾಜ್, ಮೋಹನ್ ಮತ್ತಿತರರು ಇದ್ದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…