News Karnataka Kannada
Tuesday, April 30 2024
ಮೈಸೂರು

ಕೆರೆಗಳಿಗೆ ನೀರು ತುಂಬಿಸಲು ಅನುದಾನ ಮೀಸಲಿಡಲು ಮನವಿ

Pond
Photo Credit : News Kannada

ನಂಜನಗೂಡು: ಯಡಿಯಾಲ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಹಾಗೂ ಸಂಗಮದಲ್ಲಿ ತಡೆಗೋಡೆ ನಿರ್ಮಾಣ ಮತ್ತಿತರ ಕಾಮಗಾರಿಗಳಿಗೆ ತಲಾ 30 ಕೋಟಿ ರೂ. ಗಳನ್ನು ಪ್ರಸ್ತುತ ಬಜೆಟ್ ನಲ್ಲಿ ಮಂಜೂರು ಮಾಡುವಂತೆ ನಂಜನಗೂಡು ಶಾಸಕ ಬಿ.ಹರ್ಷವರ್ಧನ್ ಮನವಿ ಮಾಡಿದ್ದಾರೆ.

ಕಾಡಂಚಿನ ಪ್ರದೇಶದ ಜನರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ಮತ್ತು ಈ ಭಾಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದ ಯಡಿಯಾಲ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಈ ಬಜೆಟ್ ನಲ್ಲಿ ಹಣ ಒದಗಿಸುವಂತೆ ವಿನಂತಿಸಿದ್ದಾರೆ.

ನಂಜನಗೂಡು ತಾಲೂಕಿನ 12 ಮತ್ತು ಎಚ್.ಡಿ.ಕೋಟೆಯ 3 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಇದರಿಂದ 20ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರಯೋಜನವಾಗಲಿದೆ. ಅಂದಾಜು 30 ಕೋಟಿ ರೂ. ಯೋಜನೆ ಇದಾಗಿದೆ. ನುಗು ನದಿಯಿಂದ ನೀರೆತ್ತುವ ಯೋಜನೆ ಇದಾಗಿದ್ದು, ಹಣ ಬಿಡುಗಡೆಯಾದರೆ ಕೇವಲ 9 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಈ ಯೋಜನೆ 2016 -17ರಲ್ಲಿ  ವಿ.ಶ್ರೀನಿವಾಸ ಪ್ರಸಾದ ಅವರು ಕಂದಾಯ ಸಚಿವರಾಗಿದ್ದ ಸಂದರ್ಭದಲ್ಲೇ ಮಂಜೂರಾಗಿದೆ. ಆದರೆ ಹಣದ ಕೊರತೆಯಿಂದಾಗಿ ಜಾರಿಯಾಗಿಲ್ಲ. ಈಗ ಹಣ ಬಿಡುಗಡೆ ಮಾಡುವ ಮೂಲಕ ಯೋಜನೆ ಸಾಕಾರಗೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಕೋರಿದ್ದಾರೆ.

ಇದರೊಂದಿಗೆ ‘ಸಂಗಮ’ದಲ್ಲಿ ‘ಶ್ರೀ ಸದ್ಗುರು ಮಹದೇವ ತಾತಾರವರ ಗದ್ದುಗೆ’ ಹತ್ತಿರ ತಡೆಗೋಡೆ ನಿರ್ಮಾಣ ಹಾಗೂ ಪುನಶ್ಚೇತನ ಕಾಮಗಾರಿಗಾಗಿ ಅಂದಾಜು 30 ಕೋಟಿ ರೂ. ಅನುದಾನವನ್ನು 2022-23 ರ ಅಯವ್ಯಯಕ್ಕೆ ಸೇರಿಸಿ ಅನುದಾನ ಬಿಡುಗಡೆಗೊಳಿಸುವಂತೆ ಶಾಸಕರು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ  ಪ್ರಸ್ತಾವನೆ ಸಲ್ಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು