ಗುಂಡ್ಲುಪೇಟೆ: ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮೂಖಳ್ಳಿ ಕಾಲೋನಿಯಲ್ಲಿ ನಡೆದಿದೆ.
ತಾಲ್ಲೂಕಿನ ಮೂಖಳ್ಳಿ ಕಾಲೋನಿಯ ಬಾಲಕರಾದ ಮಹೇಶ್(15), ವಿಶ್ವ (17) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ದೈವಿಗಳು. ಶನಿವಾರ ಸುರಿದ ಮಳೆಗೆ ಕೆರೆಗೆ ಸಾಕಷ್ಟು ನೀರು ಹರಿದು ಬಂದಿತ್ತು. ಭಾನುವಾರ ರಜೆಯಿದ್ದ ಕಾರಣ ಕೆರೆಯ ನೀರಿನಲ್ಲಿ ಈಜಲು ಇವರಿಬ್ಬರು ತೆರಳಿದ್ದರು. ಈಜುವ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.