ಕೆ.ಆರ್.ನಗರ: ತೋಟದ ಮನೆಯಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಅರ್ಜುನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹಾಸನ-ಮೈಸೂರು ಹೆದ್ದಾರಿಯ ಪಕ್ಕದ ಜಮೀನಿನ ತೋಟದ ಪಂಪ್ಸೆಟ್ ಶೆಡ್ಡ್ನಲ್ಲಿ ಅರ್ಜುನಹಳ್ಳಿ ಗ್ರಾಮದ ನಿವಾಸಿ ರಮೇಶ್ರಾಜ್ (58)ರನ್ನು ಕಳೆದ ರಾತ್ರಿ ದುಷ್ಕರ್ಮಿಗಳು ಕತ್ತು ಸೀಳಿ ಹತ್ಯೆ ಮಾಡಿದ್ದಾರೆ.
ಘಟನೆಯಿಂದ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದ್ದು, ಕೊಲೆಯಾದ ರಮೇಶ್ ರಾಜ್ ಅವರಿಗೆ ಇಬ್ಬರು ಪತ್ನಿಯರು, ನಾಲ್ವರು ಗಂಡು ಮಕ್ಕಳು, ಓರ್ವ ಪುತ್ರಿ ಇದ್ದಾರೆ. ಈ ಸಂಬಂಧ ರಮೇಶ್ರಾಜ್ ಪತ್ನಿ ಸುಧಾ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪಿಎಸ್ಐ ಚಂದ್ರಹಾಸ ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್, ಡಿವೈಎಸ್ಪಿ ಡಾ.ಸುಮೀತ್ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಕೊಲೆ ಸಂಬಂಧ ಮಾಹಿತಿ ಪಡೆದರಲ್ಲದೆ, ಅಪರಾಧಿಗಳ ಹುಡುಕಾಟಕ್ಕೆ ತಂಡ ರಚಿಸಿ ತನಿಖೆಗೆ ಕ್ರಮ ಕೈಗೊಂಡಿದ್ದಾರೆ. ಸ್ಥಳಕ್ಕೆ ಶಾಸಕ ಸಾ.ರಾ.ಮಹೇಶ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರಲ್ಲದೆ, ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದರು.