ಮೈಸೂರು: ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸಿದ್ದ ಪಾದಯಾತ್ರೆಯಲ್ಲಿ ಭದ್ರತೆಗಾಗಿ 200 ಕೆ ಎಸ್ ಆರ್ ಪಿ ಸಿಬ್ಬಂದಿಗಳು ನಿಯೋಜಿಸಲ್ಪಟ್ಟಿದ್ದರು. ಅವರಲ್ಲಿ ಇದೀಗ 39 ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಎಲ್ಲಾ ಸಿಬ್ಬಂದಿಗಳನ್ನು ಟೆಸ್ಟ್ ಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗಿದೆ.
ಮೈಸೂರಿನ ಕೆ ಎಸ್ ಆರ್ ಪಿ ಸಿಬ್ಬಂದಿಗಳಿಗೂ ಕೊರೊನಾ ಸೋಂಕು ವಕ್ಕರಿಸಿದೆ.ಕೆ ಎಸ್ ಆರ್ ಪಿಯ 39 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇನ್ನಷ್ಟು ಸಿಬ್ಬಂದಿಗೆ ಸೋಂಕು ಹರಡುವ ಭೀತಿ ಎದುರಾಗಿದೆ.ಈ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.