News Karnataka Kannada
Monday, April 29 2024
ಮೈಸೂರು

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕಚ್ಚಿದ ಬಾಳೆ

Gundlupete
Photo Credit :

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಸುರಿದ ಮೊದಲ ಮುಂಗಾರು ಮಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದು, ಬಾಳೆ, ತೆಂಗು ಬೆಳೆದ ರೈತರು ಇದೀಗ ಚಿಂತಾಕ್ರಾಂತರಾಗಿದ್ದಾರೆ.

ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಹಲವೆಡೆ ಮಳೆ ಸುರಿದಿದ್ದು, ಕೆಲವಡೆ ಹರ್ಷ ತಂದಿದ್ದರೆ ಮತ್ತೆ ಕೆಲವೆಡೆ ಅನಾಹುತ ಸೃಷ್ಟಿಸಿದೆ. ತಾಲೂಕಿನ ಬೇಗೂರು, ಕಸಬಾ, ತೆರಕಣಾಂಬಿ ಹೋಬಳಿಯ ಅನೇಕ ಗ್ರಾಮದ ರೈತರು ಬೆಳೆದಿದ್ದ ಮುಸುಕಿನ ಜೋಳ, ತೆಂಗು, ಬಾಳೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂ ನಷ್ಟ ಸಂಭವಿಸಿದೆ.

ತಾಲ್ಲೂಕಿನಾದ್ಯಾಂತ ಶನಿವಾರ ಮತ್ತು ಭಾನುವಾರ ಭಾರಿ ಗಾಳಿ ಮಳೆ ಸುರಿದಿದ್ದು ಪರಿಣಾಮ ಗೊನೆಬಿಟ್ಟಿದ್ದ ಬಾಳೆ ರಭಸದಿಂದ ಬೀಸಿದ ಗಾಳಿಗೆ ಮುರಿದು ಬಿದ್ದಿದೆ. ಇನ್ನೊಂದೆಡೆ ಮುಸುಕಿನ ಜೋಳ, ತೆಂಗು ಬೆಳೆದಿದ್ದ ರೈತರು ನಷ್ಟ ಅನುಭವಿಸುವಂತಾಗಿದೆ. ವಿಷಯ ತಿಳಿದು ಭಾನುವಾರ ತಹಶೀಲ್ದಾರ್ ರವಿಶಂಕರ್ ಅವರು ಅಧಿಕಾರಿಗಳೊಂದಿಗೆ ಮಳೆಹಾನಿಗೀಡಾದ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು