News Karnataka Kannada
Friday, May 03 2024
ಮೈಸೂರು

ಗೃಹಮಂತ್ರಿ ಅರಗ ಜ್ಞಾನೇಂದ್ರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

Araga Jnanendra.
Photo Credit :

ಮೈಸೂರು,  : ಕರ್ನಾಟಕ ರಾಜ್ಯದ ಗೃಹಮಂತ್ರಿಗಳಾದ ಅರಗ ಜ್ಞಾನೇಂದ್ರ ಅವರು ಮಹಿಳೆಯರ
ರಕ್ಷಣೆ ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ರಾಜೀನಾಮೆಗೆ ಒತ್ತಾಯಿಸಿ
ಮೈಸೂರು ನಗರ (ಜಿಲ್ಲಾ)ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಎಫ್ ಟಿ ಎಸ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಮಾತನಾಡಿ
ಅತ್ಯಾಚಾರ ಮಾಡಿದ ಕಿಡಿಗೇಡಿಗಳನ್ನು ಇನ್ನೂ ಬಂಧಿಸಿಲ್ಲ. ಮೈಸೂರು ನಗರ ಪೊಲೀಸ್ ಈ
ಘಟನೆಯನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಮೈಸೂರು ನಗರದಲ್ಲಿ
ಕಳೆದೆರಡು ದಿನ ಗಳಹಿಂದೆ ದರೋಡೆ ಪ್ರಕರಣ ನಡೆದಿದ್ದರೂ ಮೈಸೂರು ನಗರ ಪೊಲೀಸರು
ಎಚ್ಚೆತ್ತುಕೊಳ್ಳಲಿಲ್ಲ. ಹೀಗಾಗಿ ಮೈಸೂರು ನಗರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು
ಹಾಗೂ ಅಪರಾದ ಪ್ರಕರಣಗಳು ಹೆಚ್ಚುತ್ತಲೇ ಇವೆ. ರಾಜ್ಯ ಗೃಹಮಂತ್ರಿಗಳು ಆಡಳಿತ
ನಡೆಸುವಲ್ಲಿ ಅಸಮರ್ಥರಾಗಿದ್ದಾರೆ ಎಂದು ಆರೋಪಿಸಿದರು.
ಮೈಸೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಂತ್ರಸ್ತೆ
ತನಿಖೆಗೆ ಸಹಕರಿಸುತ್ತಿಲ್ಲ ಎಂದು ಹೇಳುವ ಮೂಲಕ ಬೇಜವಾಬ್ದಾರಿಯಾಗಿ ವರ್ತಿಸುತ್ತಾರೆ.
ಆಕೆ ದೌರ್ಜನ್ಯಕ್ಕೆ ಒಳಗಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಜರ್ಜರಿತಳಾಗಿದ್ದಾಳೆ.
ಇಂತಹ ಪರಿಸ್ಥಿತಿಯಲ್ಲಿ ಪೊಲೀಸ್ ಇಲಾಖೆ ಉನ್ನತ ತಂತ್ರಜ್ಞಾನವನ್ನು ಬಳಸಿಕೊಂಡು
ಅಪರಾಧಿಗಳನ್ನು ಬಂಧಿಸಬೇಕು. ಯುವತಿಗೆ ಸಾಂತ್ವನ ಧೈರ್ಯ ತುಂಬುವ ಕೆಲಸ ಸರ್ಕಾರದಿಂದ
ಆಗಬೇಕು. ಗೃಹಮಂತ್ರಿಗಳು ಮಹಿಳೆಯರು 6.30ರ ನಂತರ ಹೊರಗಡೆ ತಿರುಗಾಡಬಾರದೆಂದು
ಹೇಳಿರುವುದು ಮಹಿಳೆಯರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಂತಾಗಿದೆ. ಈ ಕೂಡಲೇ
ಗೃಹಮಂತ್ರಿಗಳು ರಾಜೀನಾಮೆ ನೀಡಬೇಕು. ಮೈಸೂರು ನಗರದಲ್ಲಿ ಅತ್ಯಾಚಾರ, ದರೋಡೆ, ಕೊಲೆ,
ಸುಲಿಗೆ ಪ್ರಕರಣಗಳು ನಡೆಯುತ್ತಿದ್ದು ಇಂತಹ ಪ್ರಕರಣ ಮರುಕಳಿಸದಂತೆ ಕಟ್ಟುನಿಟ್ಟಿನ
ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು