ಮೈಸೂರು: ಹಾಲು ತರಲೆಂದು ಮನೆಯಿಂದ ಹೊರಗೆ ಹೋದ ಗೃಹಿಣಿಯ ಶವ ರೈಲ್ವೆ ಹಳಿ ಬಳಿ ಛಿದ್ರವಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ನಗರದ ಕುಂಬಾರಕೊಪ್ಪಲಿನ ನಿವಾಸಿ ಸಾಗರ್ ಎಂಬುವರ ಪತ್ನಿ ಸ್ವಾತಿ(19) ದುರಂತ ಸಾವನ್ನಪ್ಪಿದ ದುರ್ದೈವಿ. ಮೂಲತಃ ಶ್ರೀರಂಗಪಟ್ಟಣದ ನಿವಾಸಿ ಸ್ವಾತಿ ಕಳೆದ ಹತ್ತು ತಿಂಗಳ ಹಿಂದೆ ಸಾಗರ್ ನನ್ನು ಮದುವೆಯಾಗಿದ್ದಳು.
ಮೇಲ್ನೋಟಕ್ಕೆ ಗಂಡ ಹೆಂಡಿರು ಅನೋನ್ಯವಾಗಿದ್ದರು ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ರೈಲ್ವೆ ಹಳಿಯಲ್ಲಿ ಸ್ವಾತಿಯ ತಲೆ ಛಿದ್ರವಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಬಹುಶಃ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ಇದಕ್ಕೆ ಕಾರಣ ಏನಿರಬಹುದು ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ.
ಸ್ವಾತಿ ಮನೆಯಿಂದ ಹಾಲು ತರುವುದಾಗಿ ಹೇಳಿ ಜ.1ರಂದು ಹೋಗಿದ್ದಳು. ಹೀಗೆ ಹೋದವಳು ಮರಳಿ ಬಂದಿರಲಿಲ್ಲ ಎನ್ನಲಾಗಿದೆ.
ಸಂಜೆ ವೇಳೆಗೆ ನಗರದ ವಿಕ್ರಾಂತ್ ಕಾರ್ಖಾನೆ ಬಳಿ ಇರುವ ಪ್ರೀತಿ ಗ್ರಾನೈಟ್ ಬಳಿ ರೈಲ್ವೆ ಹಳಿ ಸಮೀಪ ತಲೆ ಛಿದ್ರವಾಗಿರುವ ಸ್ವಾತಿ ಮೃತದೇಹ ದೊರೆತಿದೆ. ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…
ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…
ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…
ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…
ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…