News Karnataka Kannada
Sunday, May 05 2024
ಮೈಸೂರು

ಗೋ ಹತ್ಯೆ ನಿಷೇಧ ಕಾಯ್ದೆ ಬಳಿಕ ಸಾವಿರಾರು ಗೋವುಗಳ ರಕ್ಷಣೆ

Prabhu Chavan
Photo Credit :

ಮೈಸೂರು: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ಸಾವಿರಾರು ಗೋವುಗಳ ಹತ್ಯೆಗೆ ಕಡಿವಾಣ ಹಾಕಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರುಮಠಕ್ಕೆ ಭೇಟಿ ನೀಡಿ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾನೂನು ಅನುಷ್ಠಾನಕ್ಕೆ ಬಂದ ಬಳಿಕ ಗೋ ಹತ್ಯೆಗೆ ಕಡಿವಾಣ ಹಾಕಲಾಗಿದ್ದು, ಬಳಿಕ ಬಕ್ರೀದ್ ಹಬ್ಬದ ವೇಳೆಯಲ್ಲೇ 6 ಸಾವಿರ ಗೋವುಗಳನ್ನು ರಕ್ಷಣೆ ಮಾಡಲಾಗುದೆ. ಇದಕ್ಕಾಗಿ ಚೆಕ್ ಪೋಸ್ಟ್‌ಗಳಲ್ಲಿ ಇಲಾಖಾ ವೈದ್ಯರನ್ನು ನಿಯೋಜಿಸಲಾಗಿತ್ತು. ಎಸ್‌ಪಿಗೆ ಪಶು ಸಾಕಾಣೆ ತಡೆಯಲು ಎಸ್‌ಪಿ ಸೂಚನೆ ನೀಡಿದ ಪರಿಣಾಮ ಸುಮಾರು 6 ಸಾವಿರ ಹಸುಗಳ ಜೀವ ಉಳಿಸಿದೆವು ಎಂದರು.
ಇನ್ನು ಪ್ರತಿ ಜಿಲ್ಲೆಗೆ ಒಂದು ಗೋಶಾಲೆ ಆರಂಭಿಸಲು ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ಸ್ಥಾಪಿಸಲಿದ್ದೇವೆ. ದೇಶದಲ್ಲಿ ಮೊದಲ ಬಾರಿಗೆ ಸ್ಥಾಪಿಸಿದ ಪ್ರಾಣಿ ಸಾಕಾಣಿಕ ಕೇಂದ್ರಕ್ಕೆ 1 ತಿಂಗಳಲ್ಲೇ 10 ಸಾವಿರ ಕರೆ ಬಂದಿದೆ. ಈ ಪೈಕಿ ಶೇ.80 ಸಮಸ್ಯೆ ಬಗೆಹರಿಸಿದ್ದೇವೆ.ಪಶು ಸಂಜೀವಿನಿ ಪ್ರಾರಂಭಿಸಿದ್ದು, 25 ಆಂಬ್ಯುಲೆನ್ಸ್ ಬುಕ್ ಮಾಡಿದ್ದೇನೆ. ಶೀಘ್ರದಲ್ಲೇ ಎಲ್ಲ ಜಿಲ್ಲೆಗಳಿಗೂ ಆಂಬ್ಯುಲೆನ್ಸ್ ನೀಡಲಾಗುವುದು ಎಂದರು. ಬಕ್ರೀದ್ ಹಬ್ಬದ ವೇಳೆ ರಾಜ್ಯದಲ್ಲಿ 6 ಸಾವಿರ ಹಸು ರಕ್ಷ ಣೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು