ಮೈಸೂರು: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ಸಾವಿರಾರು ಗೋವುಗಳ ಹತ್ಯೆಗೆ ಕಡಿವಾಣ ಹಾಕಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರುಮಠಕ್ಕೆ ಭೇಟಿ ನೀಡಿ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾನೂನು ಅನುಷ್ಠಾನಕ್ಕೆ ಬಂದ ಬಳಿಕ ಗೋ ಹತ್ಯೆಗೆ ಕಡಿವಾಣ ಹಾಕಲಾಗಿದ್ದು, ಬಳಿಕ ಬಕ್ರೀದ್ ಹಬ್ಬದ ವೇಳೆಯಲ್ಲೇ 6 ಸಾವಿರ ಗೋವುಗಳನ್ನು ರಕ್ಷಣೆ ಮಾಡಲಾಗುದೆ. ಇದಕ್ಕಾಗಿ ಚೆಕ್ ಪೋಸ್ಟ್ಗಳಲ್ಲಿ ಇಲಾಖಾ ವೈದ್ಯರನ್ನು ನಿಯೋಜಿಸಲಾಗಿತ್ತು. ಎಸ್ಪಿಗೆ ಪಶು ಸಾಕಾಣೆ ತಡೆಯಲು ಎಸ್ಪಿ ಸೂಚನೆ ನೀಡಿದ ಪರಿಣಾಮ ಸುಮಾರು 6 ಸಾವಿರ ಹಸುಗಳ ಜೀವ ಉಳಿಸಿದೆವು ಎಂದರು.
ಇನ್ನು ಪ್ರತಿ ಜಿಲ್ಲೆಗೆ ಒಂದು ಗೋಶಾಲೆ ಆರಂಭಿಸಲು ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ಸ್ಥಾಪಿಸಲಿದ್ದೇವೆ. ದೇಶದಲ್ಲಿ ಮೊದಲ ಬಾರಿಗೆ ಸ್ಥಾಪಿಸಿದ ಪ್ರಾಣಿ ಸಾಕಾಣಿಕ ಕೇಂದ್ರಕ್ಕೆ 1 ತಿಂಗಳಲ್ಲೇ 10 ಸಾವಿರ ಕರೆ ಬಂದಿದೆ. ಈ ಪೈಕಿ ಶೇ.80 ಸಮಸ್ಯೆ ಬಗೆಹರಿಸಿದ್ದೇವೆ.ಪಶು ಸಂಜೀವಿನಿ ಪ್ರಾರಂಭಿಸಿದ್ದು, 25 ಆಂಬ್ಯುಲೆನ್ಸ್ ಬುಕ್ ಮಾಡಿದ್ದೇನೆ. ಶೀಘ್ರದಲ್ಲೇ ಎಲ್ಲ ಜಿಲ್ಲೆಗಳಿಗೂ ಆಂಬ್ಯುಲೆನ್ಸ್ ನೀಡಲಾಗುವುದು ಎಂದರು. ಬಕ್ರೀದ್ ಹಬ್ಬದ ವೇಳೆ ರಾಜ್ಯದಲ್ಲಿ 6 ಸಾವಿರ ಹಸು ರಕ್ಷ ಣೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.